ಮೇ.19 : ಕರುಂಬಿತ್ತಿಲ್ ಸಂಗೀತ ಶಿಬಿರ ಸಂಪನ್ನ

May 18, 2019
10:32 PM

ಕರುಂಬಿತ್ತಿಲ್(ನಿಡ್ಳೆ): ಧರ್ಮಸ್ಥಳ ಸಮೀಮಪ ನಿಡ್ಳೆ ಕರುಂಬಿತ್ತಿಲ್‍ನಲ್ಲಿ ನಡೆಯುತ್ತಿರುವ ಕರುಂಬಿತ್ತಿಲ್ ಸಂಗೀತ ಶಿಬಿರ ಮೇ.19 ರಂದು ಸಂಪನ್ನಗೊಳ್ಳಲಿದೆ.

ಒಂದು ವಾರಗಳ ಕಾಲ ನಡೆದ ಶಿಬಿರದಲ್ಲಿ ಸಂಗೀತದ ಸುಧೆ ಹರಿಸಿತು. ಪ್ರಸಿದ್ಧ ವಯಲಿನಿಸ್ಟ್ ವಿದ್ವಾನ್ ವಿಠಲ ರಾಮಮೂರ್ತಿ ಅವರ ಕರುಂಬಿತ್ತಿಲ್‍ನ ಮನೆಯಲ್ಲಿ ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಕರುಂಬಿತ್ತಿಲ್ ಸಂಗೀತ ಶಿಬಿರವು ಶುದ್ಧ ಸಂಗೀತದ ಅದ್ಭುತ ಲೋಕವನ್ನು ತೆರೆದಿಡುತ್ತದೆ. ಶಿಬಿರದಲ್ಲಿ ಸಂಗೀತ ಲೋಕದ ದಿಗ್ಗಜರು, ಸಂಗೀತ ವಿದ್ಯಾರ್ಥಿಗಳು, ಸಂಗೀತ ಪ್ರೇಮಿಗಳು ಒಟ್ಟಾಗಿ ಒಂದು ವಾರಗಳ ಕಾಲ ಸಂಗೀತದ ರಸಧಾರೆಯನ್ನು ಹರಿಸುತ್ತಾರೆ. ಕೇರಳ, ಕರ್ನಾಟಕ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಇನ್ನೂರ ಇಪ್ಪತ್ತಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.

ವಿದ್ವಾನ್ ಟಿ.ವಿ.ಗೋಪಾಲಕೃಷ್ಣನ್, ವಯಲಿನ್ ಮಾಂತ್ರಿಕ ವಿದ್ವಾನ್ ವಿ.ವಿ.ಸುಬ್ರಹ್ಮಣ್ಯಂ, ವಿದ್ವಾನ್ ಉಡುಪಿ ಗೋಪಾಲಕೃಷ್ಣನ್, ಬಾಂಬೆ ಜಯಶ್ರೀ ರಾಂನಾಥ್, ವಿದ್ವಾನ್ ಅಭಿಷೇಕ್ ರಘುರಾಂ, ವಿದ್ವಾನ್ ಶ್ರೀಮುಷ್ಣಂ ವಿ.ರಾಜಾರಾವ್, ತಿರುವಾರೂರ್ ಭಕ್ತವಲ್ಸಲಂ ಹೀಗೆ ಪ್ರಮುಖರು ಈ ಬಾರಿಯ ಶಿಬಿರದಲ್ಲಿ ಭಾಗವಹಿಸಿದ್ದಾರೆ ವಿದುಷಿ ಬಾಂಬೆ ಜಯಶ್ರೀ ರಾಂನಾಥ್ ಅವರ ಸಂಗೀತ ಕಛೇರಿಯೊಂದಿಗೆ ಶಿಬಿರ ಸಮಾಪನಗೊಳ್ಳಲಿದೆ.

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮುಖ್ಯ ಅತಿಥಿಗಳಾಗಿ ಭಾವಹಿಸಲಿದ್ದಾರೆ ಎಂದು ವಿದ್ವಾನ್ ವಿಠಲ ರಾಮಮೂರ್ತಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಜೂನ್ 30ರೊಳಗೆ LPG e-KYC ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಸ್ಥಗಿತ ? ಗ್ರಾಹಕರಿಗೆ ಮಹತ್ವದ ಎಚ್ಚರಿಕೆ
June 21, 2026
10:09 PM
by: ದ ರೂರಲ್ ಮಿರರ್.ಕಾಂ
PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ
June 19, 2026
8:44 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror