Advertisement
ಕಲೆ-ಸಂಸ್ಕೃತಿ

ಮೇ.19 : ಕರುಂಬಿತ್ತಿಲ್ ಸಂಗೀತ ಶಿಬಿರ ಸಂಪನ್ನ

Share

ಕರುಂಬಿತ್ತಿಲ್(ನಿಡ್ಳೆ): ಧರ್ಮಸ್ಥಳ ಸಮೀಮಪ ನಿಡ್ಳೆ ಕರುಂಬಿತ್ತಿಲ್‍ನಲ್ಲಿ ನಡೆಯುತ್ತಿರುವ ಕರುಂಬಿತ್ತಿಲ್ ಸಂಗೀತ ಶಿಬಿರ ಮೇ.19 ರಂದು ಸಂಪನ್ನಗೊಳ್ಳಲಿದೆ.

ಒಂದು ವಾರಗಳ ಕಾಲ ನಡೆದ ಶಿಬಿರದಲ್ಲಿ ಸಂಗೀತದ ಸುಧೆ ಹರಿಸಿತು. ಪ್ರಸಿದ್ಧ ವಯಲಿನಿಸ್ಟ್ ವಿದ್ವಾನ್ ವಿಠಲ ರಾಮಮೂರ್ತಿ ಅವರ ಕರುಂಬಿತ್ತಿಲ್‍ನ ಮನೆಯಲ್ಲಿ ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಕರುಂಬಿತ್ತಿಲ್ ಸಂಗೀತ ಶಿಬಿರವು ಶುದ್ಧ ಸಂಗೀತದ ಅದ್ಭುತ ಲೋಕವನ್ನು ತೆರೆದಿಡುತ್ತದೆ. ಶಿಬಿರದಲ್ಲಿ ಸಂಗೀತ ಲೋಕದ ದಿಗ್ಗಜರು, ಸಂಗೀತ ವಿದ್ಯಾರ್ಥಿಗಳು, ಸಂಗೀತ ಪ್ರೇಮಿಗಳು ಒಟ್ಟಾಗಿ ಒಂದು ವಾರಗಳ ಕಾಲ ಸಂಗೀತದ ರಸಧಾರೆಯನ್ನು ಹರಿಸುತ್ತಾರೆ. ಕೇರಳ, ಕರ್ನಾಟಕ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಇನ್ನೂರ ಇಪ್ಪತ್ತಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.

ವಿದ್ವಾನ್ ಟಿ.ವಿ.ಗೋಪಾಲಕೃಷ್ಣನ್, ವಯಲಿನ್ ಮಾಂತ್ರಿಕ ವಿದ್ವಾನ್ ವಿ.ವಿ.ಸುಬ್ರಹ್ಮಣ್ಯಂ, ವಿದ್ವಾನ್ ಉಡುಪಿ ಗೋಪಾಲಕೃಷ್ಣನ್, ಬಾಂಬೆ ಜಯಶ್ರೀ ರಾಂನಾಥ್, ವಿದ್ವಾನ್ ಅಭಿಷೇಕ್ ರಘುರಾಂ, ವಿದ್ವಾನ್ ಶ್ರೀಮುಷ್ಣಂ ವಿ.ರಾಜಾರಾವ್, ತಿರುವಾರೂರ್ ಭಕ್ತವಲ್ಸಲಂ ಹೀಗೆ ಪ್ರಮುಖರು ಈ ಬಾರಿಯ ಶಿಬಿರದಲ್ಲಿ ಭಾಗವಹಿಸಿದ್ದಾರೆ ವಿದುಷಿ ಬಾಂಬೆ ಜಯಶ್ರೀ ರಾಂನಾಥ್ ಅವರ ಸಂಗೀತ ಕಛೇರಿಯೊಂದಿಗೆ ಶಿಬಿರ ಸಮಾಪನಗೊಳ್ಳಲಿದೆ.

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮುಖ್ಯ ಅತಿಥಿಗಳಾಗಿ ಭಾವಹಿಸಲಿದ್ದಾರೆ ಎಂದು ವಿದ್ವಾನ್ ವಿಠಲ ರಾಮಮೂರ್ತಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

4 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

10 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

11 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago