Advertisement
ಕಲೆ-ಸಂಸ್ಕೃತಿ

ಮೇ.19 : ಕರುಂಬಿತ್ತಿಲ್ ಸಂಗೀತ ಶಿಬಿರ ಸಂಪನ್ನ

Share

ಕರುಂಬಿತ್ತಿಲ್(ನಿಡ್ಳೆ): ಧರ್ಮಸ್ಥಳ ಸಮೀಮಪ ನಿಡ್ಳೆ ಕರುಂಬಿತ್ತಿಲ್‍ನಲ್ಲಿ ನಡೆಯುತ್ತಿರುವ ಕರುಂಬಿತ್ತಿಲ್ ಸಂಗೀತ ಶಿಬಿರ ಮೇ.19 ರಂದು ಸಂಪನ್ನಗೊಳ್ಳಲಿದೆ.

ಒಂದು ವಾರಗಳ ಕಾಲ ನಡೆದ ಶಿಬಿರದಲ್ಲಿ ಸಂಗೀತದ ಸುಧೆ ಹರಿಸಿತು. ಪ್ರಸಿದ್ಧ ವಯಲಿನಿಸ್ಟ್ ವಿದ್ವಾನ್ ವಿಠಲ ರಾಮಮೂರ್ತಿ ಅವರ ಕರುಂಬಿತ್ತಿಲ್‍ನ ಮನೆಯಲ್ಲಿ ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಕರುಂಬಿತ್ತಿಲ್ ಸಂಗೀತ ಶಿಬಿರವು ಶುದ್ಧ ಸಂಗೀತದ ಅದ್ಭುತ ಲೋಕವನ್ನು ತೆರೆದಿಡುತ್ತದೆ. ಶಿಬಿರದಲ್ಲಿ ಸಂಗೀತ ಲೋಕದ ದಿಗ್ಗಜರು, ಸಂಗೀತ ವಿದ್ಯಾರ್ಥಿಗಳು, ಸಂಗೀತ ಪ್ರೇಮಿಗಳು ಒಟ್ಟಾಗಿ ಒಂದು ವಾರಗಳ ಕಾಲ ಸಂಗೀತದ ರಸಧಾರೆಯನ್ನು ಹರಿಸುತ್ತಾರೆ. ಕೇರಳ, ಕರ್ನಾಟಕ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಇನ್ನೂರ ಇಪ್ಪತ್ತಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.

ವಿದ್ವಾನ್ ಟಿ.ವಿ.ಗೋಪಾಲಕೃಷ್ಣನ್, ವಯಲಿನ್ ಮಾಂತ್ರಿಕ ವಿದ್ವಾನ್ ವಿ.ವಿ.ಸುಬ್ರಹ್ಮಣ್ಯಂ, ವಿದ್ವಾನ್ ಉಡುಪಿ ಗೋಪಾಲಕೃಷ್ಣನ್, ಬಾಂಬೆ ಜಯಶ್ರೀ ರಾಂನಾಥ್, ವಿದ್ವಾನ್ ಅಭಿಷೇಕ್ ರಘುರಾಂ, ವಿದ್ವಾನ್ ಶ್ರೀಮುಷ್ಣಂ ವಿ.ರಾಜಾರಾವ್, ತಿರುವಾರೂರ್ ಭಕ್ತವಲ್ಸಲಂ ಹೀಗೆ ಪ್ರಮುಖರು ಈ ಬಾರಿಯ ಶಿಬಿರದಲ್ಲಿ ಭಾಗವಹಿಸಿದ್ದಾರೆ ವಿದುಷಿ ಬಾಂಬೆ ಜಯಶ್ರೀ ರಾಂನಾಥ್ ಅವರ ಸಂಗೀತ ಕಛೇರಿಯೊಂದಿಗೆ ಶಿಬಿರ ಸಮಾಪನಗೊಳ್ಳಲಿದೆ.

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮುಖ್ಯ ಅತಿಥಿಗಳಾಗಿ ಭಾವಹಿಸಲಿದ್ದಾರೆ ಎಂದು ವಿದ್ವಾನ್ ವಿಠಲ ರಾಮಮೂರ್ತಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

11 minutes ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

16 minutes ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

17 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago