Advertisement
ಕಲೆ-ಸಂಸ್ಕೃತಿ

ಮೇ.19 : ಕರುಂಬಿತ್ತಿಲ್ ಸಂಗೀತ ಶಿಬಿರ ಸಂಪನ್ನ

Share

ಕರುಂಬಿತ್ತಿಲ್(ನಿಡ್ಳೆ): ಧರ್ಮಸ್ಥಳ ಸಮೀಮಪ ನಿಡ್ಳೆ ಕರುಂಬಿತ್ತಿಲ್‍ನಲ್ಲಿ ನಡೆಯುತ್ತಿರುವ ಕರುಂಬಿತ್ತಿಲ್ ಸಂಗೀತ ಶಿಬಿರ ಮೇ.19 ರಂದು ಸಂಪನ್ನಗೊಳ್ಳಲಿದೆ.

ಒಂದು ವಾರಗಳ ಕಾಲ ನಡೆದ ಶಿಬಿರದಲ್ಲಿ ಸಂಗೀತದ ಸುಧೆ ಹರಿಸಿತು. ಪ್ರಸಿದ್ಧ ವಯಲಿನಿಸ್ಟ್ ವಿದ್ವಾನ್ ವಿಠಲ ರಾಮಮೂರ್ತಿ ಅವರ ಕರುಂಬಿತ್ತಿಲ್‍ನ ಮನೆಯಲ್ಲಿ ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಕರುಂಬಿತ್ತಿಲ್ ಸಂಗೀತ ಶಿಬಿರವು ಶುದ್ಧ ಸಂಗೀತದ ಅದ್ಭುತ ಲೋಕವನ್ನು ತೆರೆದಿಡುತ್ತದೆ. ಶಿಬಿರದಲ್ಲಿ ಸಂಗೀತ ಲೋಕದ ದಿಗ್ಗಜರು, ಸಂಗೀತ ವಿದ್ಯಾರ್ಥಿಗಳು, ಸಂಗೀತ ಪ್ರೇಮಿಗಳು ಒಟ್ಟಾಗಿ ಒಂದು ವಾರಗಳ ಕಾಲ ಸಂಗೀತದ ರಸಧಾರೆಯನ್ನು ಹರಿಸುತ್ತಾರೆ. ಕೇರಳ, ಕರ್ನಾಟಕ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಇನ್ನೂರ ಇಪ್ಪತ್ತಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.

ವಿದ್ವಾನ್ ಟಿ.ವಿ.ಗೋಪಾಲಕೃಷ್ಣನ್, ವಯಲಿನ್ ಮಾಂತ್ರಿಕ ವಿದ್ವಾನ್ ವಿ.ವಿ.ಸುಬ್ರಹ್ಮಣ್ಯಂ, ವಿದ್ವಾನ್ ಉಡುಪಿ ಗೋಪಾಲಕೃಷ್ಣನ್, ಬಾಂಬೆ ಜಯಶ್ರೀ ರಾಂನಾಥ್, ವಿದ್ವಾನ್ ಅಭಿಷೇಕ್ ರಘುರಾಂ, ವಿದ್ವಾನ್ ಶ್ರೀಮುಷ್ಣಂ ವಿ.ರಾಜಾರಾವ್, ತಿರುವಾರೂರ್ ಭಕ್ತವಲ್ಸಲಂ ಹೀಗೆ ಪ್ರಮುಖರು ಈ ಬಾರಿಯ ಶಿಬಿರದಲ್ಲಿ ಭಾಗವಹಿಸಿದ್ದಾರೆ ವಿದುಷಿ ಬಾಂಬೆ ಜಯಶ್ರೀ ರಾಂನಾಥ್ ಅವರ ಸಂಗೀತ ಕಛೇರಿಯೊಂದಿಗೆ ಶಿಬಿರ ಸಮಾಪನಗೊಳ್ಳಲಿದೆ.

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮುಖ್ಯ ಅತಿಥಿಗಳಾಗಿ ಭಾವಹಿಸಲಿದ್ದಾರೆ ಎಂದು ವಿದ್ವಾನ್ ವಿಠಲ ರಾಮಮೂರ್ತಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

4 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

7 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

8 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

22 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

23 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

23 hours ago