ಕರುಂಬಿತ್ತಿಲ್(ನಿಡ್ಳೆ): ಧರ್ಮಸ್ಥಳ ಸಮೀಮಪ ನಿಡ್ಳೆ ಕರುಂಬಿತ್ತಿಲ್ನಲ್ಲಿ ನಡೆಯುತ್ತಿರುವ ಕರುಂಬಿತ್ತಿಲ್ ಸಂಗೀತ ಶಿಬಿರ ಮೇ.19 ರಂದು ಸಂಪನ್ನಗೊಳ್ಳಲಿದೆ.
ಒಂದು ವಾರಗಳ ಕಾಲ ನಡೆದ ಶಿಬಿರದಲ್ಲಿ ಸಂಗೀತದ ಸುಧೆ ಹರಿಸಿತು. ಪ್ರಸಿದ್ಧ ವಯಲಿನಿಸ್ಟ್ ವಿದ್ವಾನ್ ವಿಠಲ ರಾಮಮೂರ್ತಿ ಅವರ ಕರುಂಬಿತ್ತಿಲ್ನ ಮನೆಯಲ್ಲಿ ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಕರುಂಬಿತ್ತಿಲ್ ಸಂಗೀತ ಶಿಬಿರವು ಶುದ್ಧ ಸಂಗೀತದ ಅದ್ಭುತ ಲೋಕವನ್ನು ತೆರೆದಿಡುತ್ತದೆ. ಶಿಬಿರದಲ್ಲಿ ಸಂಗೀತ ಲೋಕದ ದಿಗ್ಗಜರು, ಸಂಗೀತ ವಿದ್ಯಾರ್ಥಿಗಳು, ಸಂಗೀತ ಪ್ರೇಮಿಗಳು ಒಟ್ಟಾಗಿ ಒಂದು ವಾರಗಳ ಕಾಲ ಸಂಗೀತದ ರಸಧಾರೆಯನ್ನು ಹರಿಸುತ್ತಾರೆ. ಕೇರಳ, ಕರ್ನಾಟಕ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಇನ್ನೂರ ಇಪ್ಪತ್ತಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.
ವಿದ್ವಾನ್ ಟಿ.ವಿ.ಗೋಪಾಲಕೃಷ್ಣನ್, ವಯಲಿನ್ ಮಾಂತ್ರಿಕ ವಿದ್ವಾನ್ ವಿ.ವಿ.ಸುಬ್ರಹ್ಮಣ್ಯಂ, ವಿದ್ವಾನ್ ಉಡುಪಿ ಗೋಪಾಲಕೃಷ್ಣನ್, ಬಾಂಬೆ ಜಯಶ್ರೀ ರಾಂನಾಥ್, ವಿದ್ವಾನ್ ಅಭಿಷೇಕ್ ರಘುರಾಂ, ವಿದ್ವಾನ್ ಶ್ರೀಮುಷ್ಣಂ ವಿ.ರಾಜಾರಾವ್, ತಿರುವಾರೂರ್ ಭಕ್ತವಲ್ಸಲಂ ಹೀಗೆ ಪ್ರಮುಖರು ಈ ಬಾರಿಯ ಶಿಬಿರದಲ್ಲಿ ಭಾಗವಹಿಸಿದ್ದಾರೆ ವಿದುಷಿ ಬಾಂಬೆ ಜಯಶ್ರೀ ರಾಂನಾಥ್ ಅವರ ಸಂಗೀತ ಕಛೇರಿಯೊಂದಿಗೆ ಶಿಬಿರ ಸಮಾಪನಗೊಳ್ಳಲಿದೆ.
ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮುಖ್ಯ ಅತಿಥಿಗಳಾಗಿ ಭಾವಹಿಸಲಿದ್ದಾರೆ ಎಂದು ವಿದ್ವಾನ್ ವಿಠಲ ರಾಮಮೂರ್ತಿ ತಿಳಿಸಿದ್ದಾರೆ.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…