Advertisement

ಕರೆಂಟ್ ಶಾಕ್ ಭಯವಿಲ್ಲದ ಜೀವರಕ್ಷಕ ಅಲ್ಯೂಮಿನಿಯಂ ಏಣಿ…..

Share

ತೋಟದೊಳಗೆ ಅಲ್ಯೂಮಿನಿಯಂ ಏಣಿಯನ್ನು ಅಚೀಚೆ ಒಯ್ಯುವಾಗ ವಿದ್ಯುತ್ ವಯರಿಗೆ ತಾಗಿ ಇನ್ನು ಅವಘಡ ಸಂಭವಿಸದು. ಪುತ್ತೂರಿನ ಬೊಳ್ವಾರಿನಲ್ಲಿರುವ ಎಸ್.ಆರ್.ಕೆ. ಅಲ್ಯೂಮಿನಿಯಂ ಫೈಬರ್ಸ್ ಇವರು ಅಲ್ಯೂಮಿನಿಯಂ ಏಣಿಗೆ ವಿದ್ಯುತ್ ನಿರೋಧ ರಕ್ಷಾಕವಚವನ್ನು (ಇನ್ಸೂಲೇಶನ್) ತೊಡಿಸಿದ್ದಾರೆ. ಇದು ವಿದ್ಯುತ್ ಶಾಕ್ ಆಗುವುದನ್ನು ತಪ್ಪಿಸುತ್ತದೆ.
ಈಚೆಗಿನ ದಿವಸಗಳಲ್ಲಿ ಹೆಚ್ಚಾಗಿ ಏಣಿಗಳನ್ನು ಅತ್ತಿತ್ತ ಒಯ್ಯುವಾಗ ಅಕಸ್ಮಾತ್ ವಿದ್ಯುತ್ ಲೈನಿಗೆ ತಾಗಿ ಅವಘಡಗಳು ಆಗುತ್ತಿರುವುದನ್ನು ನೋಡುತ್ತೇವೆ. ವಿದ್ಯುತ್ ಶಾಕಿಗೆ ಎಷ್ಟೋ ಜೀವ ಹಾನಿ ಸಂಭವಿಸಿದೆ. ರಕ್ಷಾಕವಚ ಹೊದೆಸಿದ ಏಣಿಗಳನ್ನು ಇನ್ನು ನಿರ್ಭೀತಿಯಿಂದ ತೋಟದೊಳಗೆ ಬಳಸಬಹುದು.

ಈಗಾಗಲೇ ಮಾರುಕಟ್ಟೆಯಲ್ಲಿರುವ ಅಲ್ಯೂಮಿನಿಯಂ ಏಣಿಗೆ – ಪೈಪು, ಮೆಟ್ಟಿಲು ಸೇರಿ – ಎಸ್.ಆರ್.ಕೆ. ಅಲ್ಯೂಮಿನಿಯಂ ಫೈಬರ್ಸ್ ಇವರು ರಕ್ಷಾವಚವನ್ನು ತೊಡಿಸಿ ಕೊಡುವಂತಹ ನೂತನ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ. ಇವರಲ್ಲಿ ಹೊಸ ಅಲ್ಯೂಮಿನಿಯಂ ಏಣಿಯೂ ಲಭ್ಯ.

ಮೂರಿಂಚು ವ್ಯಾಸದ ಪೈಪಿಗೆ ಇನ್ಸೂಲೇಶನ್ ಕವಚವನ್ನು ತೂರಿಸಿ, ಅದಕ್ಕೆ ಶಾಖ ಪ್ರಕ್ರಿಯೆಯನ್ನು ಮಾಡಿದಾಗ ಕವಚವು ಪೈಪಿಗೆ ಅಂಟಿಕೊಳ್ಳುತ್ತದೆ. ಇದೊಂದು ಹೊಸ ತಂತ್ರಜ್ಞಾನ. ಅಲ್ಯೂಮಿನಿಯಂ ಏಣಿಗೆ ರಕ್ಷಾ ಕವಚ ಹೊದೆಸಿರುವುದು ಇದೇ ಮೊದಲು. ಇದು ಕೃಷಿಕರಿಗೆ ತುಂಬಾ ಉಪಕಾರವಂತೂ ಖಂಡಿತ.

“ಹಳೆಯ ಏಣಿಯು ಅದಾಗಲೇ ಸ್ಟೆಪ್‍ಗಳನ್ನು ಹೊಂದಿರುವುದರಿಂದ ಅದಕ್ಕೆ ಪ್ರತ್ಯೇಕವಾಗಿ ಕವಚ ತೊಡಿಸಲು ಕಷ್ಟಸಾಧ್ಯ. ಕೆಲವೊಮ್ಮೆ ಹೆಚ್ಚು ಬಳಕೆ ಮಾಡಿದ್ದರಿಂದಾಗಿ ಏಣಿಗಳು ಬೆಂಡ್ ಆಗಿರುವ ಸಾಧ್ಯತೆಯೂ ಹೆಚ್ಚು. ಹಾಗಾಗಿ ಹೊಸ ಏಣಿಗೆ ಮಾತ್ರ ಇನ್ಸೂಲೇಶನ್ ಕವಚವನ್ನು ಹೊದೆಸಲು ಸಾಧ್ಯವಾಗುತ್ತದೆ. “ ಎಂದು ಎಸ್.ಆರ್.ಕೆ. ಅಲ್ಯೂಮಿನಿಯಂ ಫೈಬರ್ಸ್ ಇದರ ಸದಾಶಿವ ಭಟ್ ಎಂ. ಹೇಳುತ್ತಾರೆ.

ಇಪ್ಪತ್ತು, ಹತ್ತು ಅಡಿ ಎತ್ತರದ ಎರಡು ಏಣಿಗಳನ್ನು ಒಂದಕ್ಕೊಂದು ಜೋಡಿಸಿಕೊಂಡರೆ ಸಲೀಸಾಗಿ ಮೂವತ್ತು ಅಡಿ ಎತ್ತರದ ಮರಗಳನ್ನು ಏರಬಹುದು. ಅಡಿಕೆಮರ, ತೆಂಗಿನಮರಗಳನ್ನು ಏರಬಹುದು. ಹೊಸ ತಂತ್ರಜ್ಞಾನದ ಇನ್ಸೂಲೇಶನ್ ಏಣಿಯು ಕೆಲವೇ ದಿನಗಳಲ್ಲಿ ಕೃಷಿಕರ ಕೈಗೆ ಲಭ್ಯ.

ಏಣಿಗೆ ಬುಕ್ಕಿಂಗ್ ಆರಂಭವಾಗಿದೆ. ಏಣಿಗೆ ರಕ್ಷಾಕವಚದ ಬಳಕೆಯನ್ನು ಮನಗಂಡ ಅನೇಕರು ಉತ್ಸುಕರಾಗಿದ್ದಾರೆ. ಇದು ಕೃಷಿಕ ಸ್ವೀಕೃತಿ ಪಡೆಯುವುದರಲ್ಲಿ ಸಂಶಯವಿಲ್ಲ. ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಶ್ರೀ ಡಾ.ವೀರೇಂದ್ರ ಹೆಗ್ಗಡೆಯವರು ಏಣಿಯ ರಕ್ಷಾಕವಚ ಹೊದಿಕೆಯನ್ನು ಪರೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

(ಸದಾಶಿವ ಭಟ್ ಎಂ. – 94485 49807)

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago