ಬೆಂಗಳೂರು: ಕೊರೊನಾ ವೈರಸ್ ತಡೆಯ ಹಿನ್ನೆಲೆಯಲ್ಲಿ ಈಗಾಗಲೇ ಕೊರೊನಾ ವೈರಸ್ ಕಂಡುಬಂದ ರಾಜ್ಯದ 9 ಜಿಲ್ಲೆಗಳು ಮುಂಜಾಗ್ರತಾ ಕ್ರಮವಾಗಿ ಮಾ. 31 ರವರೆಗೆ ಲಾಕ್ ಡೌನ್ ಮಾಡಿದರೂ ಸಹಕರಿಸದ ಕಾರಣ ಇದೀಗ ಇಡೀ ಕರ್ನಾಟಕವನ್ನು ಲಾಕ್ ಡೌನ್ ಮಾಡುವ ನಿರ್ಧಾರಕ್ಕೆ ರಾಜ್ಯ ಸರಕಾರ ಮುಂದಾಗಿದೆ. ಈ ಬಗ್ಗೆ ಸಂಜೆಯ ವೇಳಗೆ ಅಧಿಕೃತ ತೀರ್ಮಾನ ಹೊರಡಿಸುವುದಾಗಿ ಸಿಎಂ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಇದೀಗ ವಿಪಕ್ಷ ನಾಯಕರ ಜೊತೆ ಚರ್ಚೆ ನಡೆಸುತ್ತಿದ್ದಾರೆ.
ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರದ ಬಗ್ಗೆ ತೀರ್ಮಾನಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ , ಮಂಗಳೂರು, ಕಲಬುರ್ಗಿ , ಕೊಡಗು, ಮೈಸೂರು, ಚಿಕ್ಕಬಳ್ಳಾಪುರ , ಧಾರವಾಡ ಜಿಲ್ಲೆಗಳು ಲಾಕ್ ಡೌನ್ ಆಗಿತ್ತು. ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮವನ್ನು ಈಗಾಗಲೇ ಕೈಗೊಂಡಿದ್ದರೂ ಜನರು ಸಹಕರಿಸದ ಹಿನ್ನಲೆಯಲ್ಲಿ, ಜನರ ಹಿತದೃಷ್ಟಿಗಾಗಿ ಈ ತೀರ್ಮಾನ ಕೈಗೊಂಡಿರುವುದಾಗಿ ಸಿಎಂ ತಿಳಿಸಿದರು. ಮನೆಯಲ್ಲೇ ಇರಿ, ಕೊರೋನಾ ಸೋಂಕು ತಡೆಗೆ ಸಹಕರಿಸಿ. ಜನರಿಗೆ ಪರಿಸ್ಥಿತಿಯ ಗಂಭೀರತೆಯ ಅರಿವಾಗುತ್ತಿಲ್ಲ. ಬಡವರ ಹಿತದೃಷ್ಟಿಯಿಂದ ಇಂದಿರಾ ಕಾಂಟೀನ್ ನಲ್ಲಿ ಬಡವರಿಗೆ ಉಚಿತ ಊಟ ವಿತರಿಸಲಾಗುವುದು ಎಂದು ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…