ಬೆಂಗಳೂರು: ಕೊರೊನಾ ವೈರಸ್ ತಡೆಯ ಹಿನ್ನೆಲೆಯಲ್ಲಿ ಈಗಾಗಲೇ ಕೊರೊನಾ ವೈರಸ್ ಕಂಡುಬಂದ ರಾಜ್ಯದ 9 ಜಿಲ್ಲೆಗಳು ಮುಂಜಾಗ್ರತಾ ಕ್ರಮವಾಗಿ ಮಾ. 31 ರವರೆಗೆ ಲಾಕ್ ಡೌನ್ ಮಾಡಿದರೂ ಸಹಕರಿಸದ ಕಾರಣ ಇದೀಗ ಇಡೀ ಕರ್ನಾಟಕವನ್ನು ಲಾಕ್ ಡೌನ್ ಮಾಡುವ ನಿರ್ಧಾರಕ್ಕೆ ರಾಜ್ಯ ಸರಕಾರ ಮುಂದಾಗಿದೆ. ಈ ಬಗ್ಗೆ ಸಂಜೆಯ ವೇಳಗೆ ಅಧಿಕೃತ ತೀರ್ಮಾನ ಹೊರಡಿಸುವುದಾಗಿ ಸಿಎಂ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಇದೀಗ ವಿಪಕ್ಷ ನಾಯಕರ ಜೊತೆ ಚರ್ಚೆ ನಡೆಸುತ್ತಿದ್ದಾರೆ.
ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರದ ಬಗ್ಗೆ ತೀರ್ಮಾನಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ , ಮಂಗಳೂರು, ಕಲಬುರ್ಗಿ , ಕೊಡಗು, ಮೈಸೂರು, ಚಿಕ್ಕಬಳ್ಳಾಪುರ , ಧಾರವಾಡ ಜಿಲ್ಲೆಗಳು ಲಾಕ್ ಡೌನ್ ಆಗಿತ್ತು. ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮವನ್ನು ಈಗಾಗಲೇ ಕೈಗೊಂಡಿದ್ದರೂ ಜನರು ಸಹಕರಿಸದ ಹಿನ್ನಲೆಯಲ್ಲಿ, ಜನರ ಹಿತದೃಷ್ಟಿಗಾಗಿ ಈ ತೀರ್ಮಾನ ಕೈಗೊಂಡಿರುವುದಾಗಿ ಸಿಎಂ ತಿಳಿಸಿದರು. ಮನೆಯಲ್ಲೇ ಇರಿ, ಕೊರೋನಾ ಸೋಂಕು ತಡೆಗೆ ಸಹಕರಿಸಿ. ಜನರಿಗೆ ಪರಿಸ್ಥಿತಿಯ ಗಂಭೀರತೆಯ ಅರಿವಾಗುತ್ತಿಲ್ಲ. ಬಡವರ ಹಿತದೃಷ್ಟಿಯಿಂದ ಇಂದಿರಾ ಕಾಂಟೀನ್ ನಲ್ಲಿ ಬಡವರಿಗೆ ಉಚಿತ ಊಟ ವಿತರಿಸಲಾಗುವುದು ಎಂದು ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…