ಬೆಂಗಳೂರು: ಕೊರೊನಾ ವೈರಸ್ ತಡೆಯ ಹಿನ್ನೆಲೆಯಲ್ಲಿ ಈಗಾಗಲೇ ಕೊರೊನಾ ವೈರಸ್ ಕಂಡುಬಂದ ರಾಜ್ಯದ 9 ಜಿಲ್ಲೆಗಳು ಮುಂಜಾಗ್ರತಾ ಕ್ರಮವಾಗಿ ಮಾ. 31 ರವರೆಗೆ ಲಾಕ್ ಡೌನ್ ಮಾಡಿದರೂ ಸಹಕರಿಸದ ಕಾರಣ ಇದೀಗ ಇಡೀ ಕರ್ನಾಟಕವನ್ನು ಲಾಕ್ ಡೌನ್ ಮಾಡುವ ನಿರ್ಧಾರಕ್ಕೆ ರಾಜ್ಯ ಸರಕಾರ ಮುಂದಾಗಿದೆ. ಈ ಬಗ್ಗೆ ಸಂಜೆಯ ವೇಳಗೆ ಅಧಿಕೃತ ತೀರ್ಮಾನ ಹೊರಡಿಸುವುದಾಗಿ ಸಿಎಂ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಇದೀಗ ವಿಪಕ್ಷ ನಾಯಕರ ಜೊತೆ ಚರ್ಚೆ ನಡೆಸುತ್ತಿದ್ದಾರೆ.
ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರದ ಬಗ್ಗೆ ತೀರ್ಮಾನಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ , ಮಂಗಳೂರು, ಕಲಬುರ್ಗಿ , ಕೊಡಗು, ಮೈಸೂರು, ಚಿಕ್ಕಬಳ್ಳಾಪುರ , ಧಾರವಾಡ ಜಿಲ್ಲೆಗಳು ಲಾಕ್ ಡೌನ್ ಆಗಿತ್ತು. ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮವನ್ನು ಈಗಾಗಲೇ ಕೈಗೊಂಡಿದ್ದರೂ ಜನರು ಸಹಕರಿಸದ ಹಿನ್ನಲೆಯಲ್ಲಿ, ಜನರ ಹಿತದೃಷ್ಟಿಗಾಗಿ ಈ ತೀರ್ಮಾನ ಕೈಗೊಂಡಿರುವುದಾಗಿ ಸಿಎಂ ತಿಳಿಸಿದರು. ಮನೆಯಲ್ಲೇ ಇರಿ, ಕೊರೋನಾ ಸೋಂಕು ತಡೆಗೆ ಸಹಕರಿಸಿ. ಜನರಿಗೆ ಪರಿಸ್ಥಿತಿಯ ಗಂಭೀರತೆಯ ಅರಿವಾಗುತ್ತಿಲ್ಲ. ಬಡವರ ಹಿತದೃಷ್ಟಿಯಿಂದ ಇಂದಿರಾ ಕಾಂಟೀನ್ ನಲ್ಲಿ ಬಡವರಿಗೆ ಉಚಿತ ಊಟ ವಿತರಿಸಲಾಗುವುದು ಎಂದು ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…