ಬೆಂಗಳೂರು: ಕೊರೊನಾ ಭೀತಿಗೆ ದೇಶವೇ ಸ್ತಬ್ಧವಾಗಿದೆ. ಇದೀಗ ಜನಸಂದಣಿ ಹೆಚ್ಚಿರುವ ಪ್ರದೇಶಗಳನ್ನು ನಿಯಂತ್ರಣ ಮಾಡುವ ಪ್ರಯತ್ನ ನಡೆಯುತ್ತಿದೆ. ನಾಳೆಯಿಂದ ಮಾ. 31 ರವರೆಗೆ ದೇಶಾದ್ಯಂತ ರೈಲುಗಳ ಸಂಚಾರ ಸ್ಥಗಿತಗೊಳ್ಳಲಿದೆ. ಈಗಾಗಲೇ ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವ 2 ನೇ ಸ್ಟೇಜ್ ನಲ್ಲಿ ಇರುವುದರಿಂದ ಸಾಕಷ್ಟು ಮುಂಜಾಗ್ರತಾ ಕ್ರಮ ಅಗತ್ಯವಾಗಿದ್ದು, ಮಾ.31 ರ ವರೆಗೆ ಜನರೇ ಸ್ವಯಂ ನಿರ್ಬಂಧ ವಿಧಿಸಿಕೊಂಡರೆ ಕೊರೊನಾ ಹರಡುವುದು ತಡೆಯಬಹುದಾಗಿದೆ. ಅಗತ್ಯ ಬಿದ್ದರೆ ಮಾ.31 ರವರೆಗೆ ಕರ್ನಾಟಕವೂ ಲಾಕ್ ಡೌನ್ ಆಗಬೇಕಾದ ಸಂದರ್ಭದ ಬಗ್ಗೆ ಚಿಂತನೆ ನಡೆದಿದೆ ಎಂದು ಅದಿಕಾರಿಗಳ ಮೂಲಗಳು ತಿಳಿಸಿವೆ.
ಕೊರೊನಾ ವೈರಸ್ ಜನಸಂದಣಿ ಇರುವಲ್ಲಿ ವೇಗವಾಗಿ ಹರಡುವ ಸಾಧ್ಯತೆ ಇರುತ್ತದೆ ಹಾಗೂ ವಾರಗಳ ನಂತರ ಖಚಿತವಾಗಿ ಪತ್ತೆಯಾಗುವ ಕಾರಣದಿಂದ ಈಗಾಗಲೇ ಕರ್ನಾಟಕದಲ್ಲಿ ಒಟ್ಟು 21 ಮಂದಿಗೆ ಕೊರೊನಾ ವೈರಸ್ ಖಚಿತವಾಗಿತ್ತು. ಇನ್ನು ಈ ಸಂಖ್ಯೆ ಹೆಚ್ಚಾಗದಂತೆ ತಡೆಯಬೇಕಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…