ಬೆಂಗಳೂರು: ಏರೋಸ್ಪೇಸ್ ವಲಯದ ಮುಂಚೂಣಿಯ ಕಂಪೆನಿ ಲಾಕೀಡ್ ಮಾರ್ಟಿನ್ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದಾಗಿದ್ದು, ಕಂಪೆನಿಯ ಉಪಾಧ್ಯಕ್ಷ, ರಿಚರ್ಡ್ ಎಫ್. ಎಂಬ್ರೋಸ್ ಅವರು ಮುಖ್ಯಮಂತ್ರಿಗಳ ಭೇಟಿಯ ಮರುದಿನವೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಈ ಕುರಿತು ಪತ್ರ ಬರೆದು, ತಮ್ಮ ಕಂಪೆನಿಯ ಭಾರತದ ಮುಖ್ಯಸ್ಥರು ಸಂಪರ್ಕಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, “ಲಾಕೀಡ್ ಮಾರ್ಟಿನ್ ಕಂಪನಿಯ ಕಾರ್ಯಕಾರಿ ಉಪಾಧ್ಯಕ್ಷ ರಿಚರ್ಡ್ ಎಫ್ ಎಂಬ್ರೋಜ್ ಬರೆದ ಪತ್ರ ಇಂದು ತಲುಪಿದೆ. ಮೇಲ್ನೊಟಕ್ಕೆ ಇದೊಂದು ಸಾಮಾನ್ಯ ಪತ್ರವೆನಿಸಿದರು ಅದರ ಗಹನತೆಯನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ. ಲಾಕೀಡ್ ಮಾರ್ಟಿನ್ ಅಮೇರಿಕಾದ ಏರೋಸ್ಪೇಸ್ ವಲಯದ ಬೃಹತ್ ಕಂಪನಿಯಾಗಿದ್ದು ಅದು ನಮ್ಮ ರಾಜ್ಯದಲ್ಲಿ ಬಂಡವಾಳ ಹೂಡಲು ಉತ್ಸುಕವಾಗಿದೆ ಎಂಬುದನ್ನು ತೋರಿಸುತ್ತದೆ. ನಮ್ಮ ದಾವೋಸ್ ಭೇಟಿ ಫಲಪ್ರದವಾಗಿದೆ ಎಂದು ಹೇಳಲು ಇದು ಒಂದು ಉದಾಹರಣೆ.
ಈ ಪತ್ರ ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಆಕರ್ಷಿಸುವ ಬಗ್ಗೆ ನಮ್ಮ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಇದಲ್ಲದೆ ನಮ್ಮ ದಾವೋಸ್ ಭೇಟಿ ಬಗ್ಗೆ ಅನುಮಾನ ವ್ಯಕ್ತಪಡಿಸುವವರಿಗೆ ಇದು ಉತ್ತರವಾಗಿದೆ. ದಾವೋಸ್ ಭೇಟಿ ನಮ್ಮ ರಾಜ್ಯಕ್ಕೆ ಬಂಡವಾಳ ಹರಿದು ಬರುವಲ್ಲಿ ಮತ್ತು ನವೆಂಬರ್ನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ (ಜಿ.ಐ.ಎಂ) ಯಶಸ್ವಿ ಕಾಣುತ್ತೇವೆ ಎಂಬ ನಮ್ಮ ನಂಬಿಕೆ ಗಟ್ಟಿಯಾಗಿದೆ” ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…