ಬೆಂಗಳೂರು: ಏರೋಸ್ಪೇಸ್ ವಲಯದ ಮುಂಚೂಣಿಯ ಕಂಪೆನಿ ಲಾಕೀಡ್ ಮಾರ್ಟಿನ್ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದಾಗಿದ್ದು, ಕಂಪೆನಿಯ ಉಪಾಧ್ಯಕ್ಷ, ರಿಚರ್ಡ್ ಎಫ್. ಎಂಬ್ರೋಸ್ ಅವರು ಮುಖ್ಯಮಂತ್ರಿಗಳ ಭೇಟಿಯ ಮರುದಿನವೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಈ ಕುರಿತು ಪತ್ರ ಬರೆದು, ತಮ್ಮ ಕಂಪೆನಿಯ ಭಾರತದ ಮುಖ್ಯಸ್ಥರು ಸಂಪರ್ಕಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, “ಲಾಕೀಡ್ ಮಾರ್ಟಿನ್ ಕಂಪನಿಯ ಕಾರ್ಯಕಾರಿ ಉಪಾಧ್ಯಕ್ಷ ರಿಚರ್ಡ್ ಎಫ್ ಎಂಬ್ರೋಜ್ ಬರೆದ ಪತ್ರ ಇಂದು ತಲುಪಿದೆ. ಮೇಲ್ನೊಟಕ್ಕೆ ಇದೊಂದು ಸಾಮಾನ್ಯ ಪತ್ರವೆನಿಸಿದರು ಅದರ ಗಹನತೆಯನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ. ಲಾಕೀಡ್ ಮಾರ್ಟಿನ್ ಅಮೇರಿಕಾದ ಏರೋಸ್ಪೇಸ್ ವಲಯದ ಬೃಹತ್ ಕಂಪನಿಯಾಗಿದ್ದು ಅದು ನಮ್ಮ ರಾಜ್ಯದಲ್ಲಿ ಬಂಡವಾಳ ಹೂಡಲು ಉತ್ಸುಕವಾಗಿದೆ ಎಂಬುದನ್ನು ತೋರಿಸುತ್ತದೆ. ನಮ್ಮ ದಾವೋಸ್ ಭೇಟಿ ಫಲಪ್ರದವಾಗಿದೆ ಎಂದು ಹೇಳಲು ಇದು ಒಂದು ಉದಾಹರಣೆ.
ಈ ಪತ್ರ ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಆಕರ್ಷಿಸುವ ಬಗ್ಗೆ ನಮ್ಮ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಇದಲ್ಲದೆ ನಮ್ಮ ದಾವೋಸ್ ಭೇಟಿ ಬಗ್ಗೆ ಅನುಮಾನ ವ್ಯಕ್ತಪಡಿಸುವವರಿಗೆ ಇದು ಉತ್ತರವಾಗಿದೆ. ದಾವೋಸ್ ಭೇಟಿ ನಮ್ಮ ರಾಜ್ಯಕ್ಕೆ ಬಂಡವಾಳ ಹರಿದು ಬರುವಲ್ಲಿ ಮತ್ತು ನವೆಂಬರ್ನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ (ಜಿ.ಐ.ಎಂ) ಯಶಸ್ವಿ ಕಾಣುತ್ತೇವೆ ಎಂಬ ನಮ್ಮ ನಂಬಿಕೆ ಗಟ್ಟಿಯಾಗಿದೆ” ಎಂದು ತಿಳಿಸಿದ್ದಾರೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…