ಬೆಂಗಳೂರು: ಏರೋಸ್ಪೇಸ್ ವಲಯದ ಮುಂಚೂಣಿಯ ಕಂಪೆನಿ ಲಾಕೀಡ್ ಮಾರ್ಟಿನ್ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದಾಗಿದ್ದು, ಕಂಪೆನಿಯ ಉಪಾಧ್ಯಕ್ಷ, ರಿಚರ್ಡ್ ಎಫ್. ಎಂಬ್ರೋಸ್ ಅವರು ಮುಖ್ಯಮಂತ್ರಿಗಳ ಭೇಟಿಯ ಮರುದಿನವೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಈ ಕುರಿತು ಪತ್ರ ಬರೆದು, ತಮ್ಮ ಕಂಪೆನಿಯ ಭಾರತದ ಮುಖ್ಯಸ್ಥರು ಸಂಪರ್ಕಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, “ಲಾಕೀಡ್ ಮಾರ್ಟಿನ್ ಕಂಪನಿಯ ಕಾರ್ಯಕಾರಿ ಉಪಾಧ್ಯಕ್ಷ ರಿಚರ್ಡ್ ಎಫ್ ಎಂಬ್ರೋಜ್ ಬರೆದ ಪತ್ರ ಇಂದು ತಲುಪಿದೆ. ಮೇಲ್ನೊಟಕ್ಕೆ ಇದೊಂದು ಸಾಮಾನ್ಯ ಪತ್ರವೆನಿಸಿದರು ಅದರ ಗಹನತೆಯನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ. ಲಾಕೀಡ್ ಮಾರ್ಟಿನ್ ಅಮೇರಿಕಾದ ಏರೋಸ್ಪೇಸ್ ವಲಯದ ಬೃಹತ್ ಕಂಪನಿಯಾಗಿದ್ದು ಅದು ನಮ್ಮ ರಾಜ್ಯದಲ್ಲಿ ಬಂಡವಾಳ ಹೂಡಲು ಉತ್ಸುಕವಾಗಿದೆ ಎಂಬುದನ್ನು ತೋರಿಸುತ್ತದೆ. ನಮ್ಮ ದಾವೋಸ್ ಭೇಟಿ ಫಲಪ್ರದವಾಗಿದೆ ಎಂದು ಹೇಳಲು ಇದು ಒಂದು ಉದಾಹರಣೆ.
ಈ ಪತ್ರ ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಆಕರ್ಷಿಸುವ ಬಗ್ಗೆ ನಮ್ಮ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಇದಲ್ಲದೆ ನಮ್ಮ ದಾವೋಸ್ ಭೇಟಿ ಬಗ್ಗೆ ಅನುಮಾನ ವ್ಯಕ್ತಪಡಿಸುವವರಿಗೆ ಇದು ಉತ್ತರವಾಗಿದೆ. ದಾವೋಸ್ ಭೇಟಿ ನಮ್ಮ ರಾಜ್ಯಕ್ಕೆ ಬಂಡವಾಳ ಹರಿದು ಬರುವಲ್ಲಿ ಮತ್ತು ನವೆಂಬರ್ನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ (ಜಿ.ಐ.ಎಂ) ಯಶಸ್ವಿ ಕಾಣುತ್ತೇವೆ ಎಂಬ ನಮ್ಮ ನಂಬಿಕೆ ಗಟ್ಟಿಯಾಗಿದೆ” ಎಂದು ತಿಳಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…