ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ: ಅ.21ಕ್ಕೆ ಮತದಾನ, 24ಕ್ಕೆ ಫಲಿತಾಂಶ

September 21, 2019
3:50 PM

ನವದೆಹಲಿ: ಕರ್ನಾಟಕದಲ್ಲಿ ಅನರ್ಹಗೊಂಡಿರುವ 17 ಶಾಸಕರ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ತನ್ಮೂಲಕ ಅನರ್ಹಗೊಂಡಿರುವ ಶಾಸಕರಿಗೆ ಬಿಗ್​ ಶಾಕ್​ ನೀಡಿದೆ.

ಸೆ.23ರಂದು ಉಪಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಸೆ.30 ಕೊನೇ ದಿನ. ನಾಮಪತ್ರ ಪರಿಶೀಲನೆ ಅಕ್ಟೋಬರ್​ 1ಕ್ಕೆ ನಡೆಯಲಿದೆ. ನಾಮಪತ್ರ ವಾಪಸು ಪಡೆಯಲು ಅಕ್ಟೋಬರ್​ 3 ಕೊನೇ ದಿನವಾಗಿದೆ. ಅಕ್ಟೋಬರ್​ 21ಕ್ಕೆ ಮತದಾನ ನಡೆಯಲಿದ್ದು, ಅಕ್ಟೋಬರ್​ 24ಕ್ಕೆ ಫಲಿತಾಂಶ ಘೋಷಿಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ 15 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕ ವಿಧಾನಸಭೆಯ ಸ್ಪೀಕರ್​ ನಮ್ಮನ್ನು ಅನರ್ಹಗೊಳಿಸಿರುವ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್​ನಲ್ಲಿ ನಡೆಯುತ್ತಿದೆ. ಆದ್ದರಿಂದ ಈ ಕ್ಷೇತ್ರಗಳಿಗೆ ಚುನಾವಣೆ ನಡೆಸದಂತೆ ಅನರ್ಹಗೊಂಡಿರುವ ಶಾಸಕರು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದರು. ಆದರೆ, ಚುನಾವಣಾ ಆಯೋಗ ಈ ಮನವಿಯನ್ನು ಪುರಸ್ಕರಿಸಿಲ್ಲ.

ಗೋಕಾಕ್, ಅಥಣಿ, ರಾಣೆಬೆನ್ನೂರು, ಕಾಗವಾಡ, ಹಿರೇಕೆರೂರು, ಯಲ್ಲಾಪುರ, ಯಶವಂತಪುರ, ವಿಜಯನಗರ, ಶಿವಾಜಿನಗರ, ಹೊಸಕೋಟೆ, ಹುಣಸೂರು, ಕೆ.ಆರ್. ಪೇಟೆ, ಕೆ.ಆರ್. ಪುರಂ, ಮಹಾಲಕ್ಷ್ಮೀ ಲೇಔಟ್, ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror