Advertisement
ಸುದ್ದಿಗಳು

ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ: ಅ.21ಕ್ಕೆ ಮತದಾನ, 24ಕ್ಕೆ ಫಲಿತಾಂಶ

Share

ನವದೆಹಲಿ: ಕರ್ನಾಟಕದಲ್ಲಿ ಅನರ್ಹಗೊಂಡಿರುವ 17 ಶಾಸಕರ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ತನ್ಮೂಲಕ ಅನರ್ಹಗೊಂಡಿರುವ ಶಾಸಕರಿಗೆ ಬಿಗ್​ ಶಾಕ್​ ನೀಡಿದೆ.

ಸೆ.23ರಂದು ಉಪಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಸೆ.30 ಕೊನೇ ದಿನ. ನಾಮಪತ್ರ ಪರಿಶೀಲನೆ ಅಕ್ಟೋಬರ್​ 1ಕ್ಕೆ ನಡೆಯಲಿದೆ. ನಾಮಪತ್ರ ವಾಪಸು ಪಡೆಯಲು ಅಕ್ಟೋಬರ್​ 3 ಕೊನೇ ದಿನವಾಗಿದೆ. ಅಕ್ಟೋಬರ್​ 21ಕ್ಕೆ ಮತದಾನ ನಡೆಯಲಿದ್ದು, ಅಕ್ಟೋಬರ್​ 24ಕ್ಕೆ ಫಲಿತಾಂಶ ಘೋಷಿಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ 15 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕ ವಿಧಾನಸಭೆಯ ಸ್ಪೀಕರ್​ ನಮ್ಮನ್ನು ಅನರ್ಹಗೊಳಿಸಿರುವ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್​ನಲ್ಲಿ ನಡೆಯುತ್ತಿದೆ. ಆದ್ದರಿಂದ ಈ ಕ್ಷೇತ್ರಗಳಿಗೆ ಚುನಾವಣೆ ನಡೆಸದಂತೆ ಅನರ್ಹಗೊಂಡಿರುವ ಶಾಸಕರು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದರು. ಆದರೆ, ಚುನಾವಣಾ ಆಯೋಗ ಈ ಮನವಿಯನ್ನು ಪುರಸ್ಕರಿಸಿಲ್ಲ.

ಗೋಕಾಕ್, ಅಥಣಿ, ರಾಣೆಬೆನ್ನೂರು, ಕಾಗವಾಡ, ಹಿರೇಕೆರೂರು, ಯಲ್ಲಾಪುರ, ಯಶವಂತಪುರ, ವಿಜಯನಗರ, ಶಿವಾಜಿನಗರ, ಹೊಸಕೋಟೆ, ಹುಣಸೂರು, ಕೆ.ಆರ್. ಪೇಟೆ, ಕೆ.ಆರ್. ಪುರಂ, ಮಹಾಲಕ್ಷ್ಮೀ ಲೇಔಟ್, ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

19 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

20 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

22 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago