ನವದೆಹಲಿ: ಕರ್ನಾಟಕದಲ್ಲಿ ಅನರ್ಹಗೊಂಡಿರುವ 17 ಶಾಸಕರ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ತನ್ಮೂಲಕ ಅನರ್ಹಗೊಂಡಿರುವ ಶಾಸಕರಿಗೆ ಬಿಗ್ ಶಾಕ್ ನೀಡಿದೆ.
ಸೆ.23ರಂದು ಉಪಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಸೆ.30 ಕೊನೇ ದಿನ. ನಾಮಪತ್ರ ಪರಿಶೀಲನೆ ಅಕ್ಟೋಬರ್ 1ಕ್ಕೆ ನಡೆಯಲಿದೆ. ನಾಮಪತ್ರ ವಾಪಸು ಪಡೆಯಲು ಅಕ್ಟೋಬರ್ 3 ಕೊನೇ ದಿನವಾಗಿದೆ. ಅಕ್ಟೋಬರ್ 21ಕ್ಕೆ ಮತದಾನ ನಡೆಯಲಿದ್ದು, ಅಕ್ಟೋಬರ್ 24ಕ್ಕೆ ಫಲಿತಾಂಶ ಘೋಷಿಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.
ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ 15 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕ ವಿಧಾನಸಭೆಯ ಸ್ಪೀಕರ್ ನಮ್ಮನ್ನು ಅನರ್ಹಗೊಳಿಸಿರುವ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ನಡೆಯುತ್ತಿದೆ. ಆದ್ದರಿಂದ ಈ ಕ್ಷೇತ್ರಗಳಿಗೆ ಚುನಾವಣೆ ನಡೆಸದಂತೆ ಅನರ್ಹಗೊಂಡಿರುವ ಶಾಸಕರು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದರು. ಆದರೆ, ಚುನಾವಣಾ ಆಯೋಗ ಈ ಮನವಿಯನ್ನು ಪುರಸ್ಕರಿಸಿಲ್ಲ.
ಗೋಕಾಕ್, ಅಥಣಿ, ರಾಣೆಬೆನ್ನೂರು, ಕಾಗವಾಡ, ಹಿರೇಕೆರೂರು, ಯಲ್ಲಾಪುರ, ಯಶವಂತಪುರ, ವಿಜಯನಗರ, ಶಿವಾಜಿನಗರ, ಹೊಸಕೋಟೆ, ಹುಣಸೂರು, ಕೆ.ಆರ್. ಪೇಟೆ, ಕೆ.ಆರ್. ಪುರಂ, ಮಹಾಲಕ್ಷ್ಮೀ ಲೇಔಟ್, ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…