Advertisement
ಸುದ್ದಿಗಳು

ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ: ಅ.21ಕ್ಕೆ ಮತದಾನ, 24ಕ್ಕೆ ಫಲಿತಾಂಶ

Share

ನವದೆಹಲಿ: ಕರ್ನಾಟಕದಲ್ಲಿ ಅನರ್ಹಗೊಂಡಿರುವ 17 ಶಾಸಕರ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ತನ್ಮೂಲಕ ಅನರ್ಹಗೊಂಡಿರುವ ಶಾಸಕರಿಗೆ ಬಿಗ್​ ಶಾಕ್​ ನೀಡಿದೆ.

ಸೆ.23ರಂದು ಉಪಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಸೆ.30 ಕೊನೇ ದಿನ. ನಾಮಪತ್ರ ಪರಿಶೀಲನೆ ಅಕ್ಟೋಬರ್​ 1ಕ್ಕೆ ನಡೆಯಲಿದೆ. ನಾಮಪತ್ರ ವಾಪಸು ಪಡೆಯಲು ಅಕ್ಟೋಬರ್​ 3 ಕೊನೇ ದಿನವಾಗಿದೆ. ಅಕ್ಟೋಬರ್​ 21ಕ್ಕೆ ಮತದಾನ ನಡೆಯಲಿದ್ದು, ಅಕ್ಟೋಬರ್​ 24ಕ್ಕೆ ಫಲಿತಾಂಶ ಘೋಷಿಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ 15 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕ ವಿಧಾನಸಭೆಯ ಸ್ಪೀಕರ್​ ನಮ್ಮನ್ನು ಅನರ್ಹಗೊಳಿಸಿರುವ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್​ನಲ್ಲಿ ನಡೆಯುತ್ತಿದೆ. ಆದ್ದರಿಂದ ಈ ಕ್ಷೇತ್ರಗಳಿಗೆ ಚುನಾವಣೆ ನಡೆಸದಂತೆ ಅನರ್ಹಗೊಂಡಿರುವ ಶಾಸಕರು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದರು. ಆದರೆ, ಚುನಾವಣಾ ಆಯೋಗ ಈ ಮನವಿಯನ್ನು ಪುರಸ್ಕರಿಸಿಲ್ಲ.

ಗೋಕಾಕ್, ಅಥಣಿ, ರಾಣೆಬೆನ್ನೂರು, ಕಾಗವಾಡ, ಹಿರೇಕೆರೂರು, ಯಲ್ಲಾಪುರ, ಯಶವಂತಪುರ, ವಿಜಯನಗರ, ಶಿವಾಜಿನಗರ, ಹೊಸಕೋಟೆ, ಹುಣಸೂರು, ಕೆ.ಆರ್. ಪೇಟೆ, ಕೆ.ಆರ್. ಪುರಂ, ಮಹಾಲಕ್ಷ್ಮೀ ಲೇಔಟ್, ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

7 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

7 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

2 days ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago