ನವದೆಹಲಿ: ಕರ್ನಾಟಕದಲ್ಲಿ ಅನರ್ಹಗೊಂಡಿರುವ 17 ಶಾಸಕರ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ತನ್ಮೂಲಕ ಅನರ್ಹಗೊಂಡಿರುವ ಶಾಸಕರಿಗೆ ಬಿಗ್ ಶಾಕ್ ನೀಡಿದೆ.
ಸೆ.23ರಂದು ಉಪಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಸೆ.30 ಕೊನೇ ದಿನ. ನಾಮಪತ್ರ ಪರಿಶೀಲನೆ ಅಕ್ಟೋಬರ್ 1ಕ್ಕೆ ನಡೆಯಲಿದೆ. ನಾಮಪತ್ರ ವಾಪಸು ಪಡೆಯಲು ಅಕ್ಟೋಬರ್ 3 ಕೊನೇ ದಿನವಾಗಿದೆ. ಅಕ್ಟೋಬರ್ 21ಕ್ಕೆ ಮತದಾನ ನಡೆಯಲಿದ್ದು, ಅಕ್ಟೋಬರ್ 24ಕ್ಕೆ ಫಲಿತಾಂಶ ಘೋಷಿಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.
ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ 15 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕ ವಿಧಾನಸಭೆಯ ಸ್ಪೀಕರ್ ನಮ್ಮನ್ನು ಅನರ್ಹಗೊಳಿಸಿರುವ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ನಡೆಯುತ್ತಿದೆ. ಆದ್ದರಿಂದ ಈ ಕ್ಷೇತ್ರಗಳಿಗೆ ಚುನಾವಣೆ ನಡೆಸದಂತೆ ಅನರ್ಹಗೊಂಡಿರುವ ಶಾಸಕರು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದರು. ಆದರೆ, ಚುನಾವಣಾ ಆಯೋಗ ಈ ಮನವಿಯನ್ನು ಪುರಸ್ಕರಿಸಿಲ್ಲ.
ಗೋಕಾಕ್, ಅಥಣಿ, ರಾಣೆಬೆನ್ನೂರು, ಕಾಗವಾಡ, ಹಿರೇಕೆರೂರು, ಯಲ್ಲಾಪುರ, ಯಶವಂತಪುರ, ವಿಜಯನಗರ, ಶಿವಾಜಿನಗರ, ಹೊಸಕೋಟೆ, ಹುಣಸೂರು, ಕೆ.ಆರ್. ಪೇಟೆ, ಕೆ.ಆರ್. ಪುರಂ, ಮಹಾಲಕ್ಷ್ಮೀ ಲೇಔಟ್, ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…