ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಡಾ. ಯಂ.ಜಿ. ನಾಯಕ್

February 28, 2020
6:31 PM

ಪುತ್ತೂರು: ಕರ್ನಾಟಕ ಸರಕಾರದ ಅರಣ್ಯ ಇಲಾಖೆಯ ಆಧೀನದಲ್ಲಿರುವ ಗೇರು ಅಭಿವೃದ್ಧಿ ನಿಗಮದ ನೂತನ ಆಡಳಿತ ಮಂಡಳಿಗೆ ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯದ ಪ್ರಧಾನ ವಿಜ್ಞಾನಿ ಹಾಗೂ ಪ್ರಭಾರ ನಿರ್ದೇಶಕ ಡಾ. ಯಂ. ಗಂಗಾಧರ ನಾಯಕ್ ರವರು ಕೇಂದ್ರ ಸರಕಾರ ನಾಮ ನಿರ್ದೇಶನದನ್ವಯ ಪ್ರತಿನಿಧಿಯಾಗಿ ಆಯ್ಕೆಯಾಗಿರುತ್ತಾರೆ.

ಕೇಂದ್ರ ಸರಕಾರದ ಕೃಷಿ ಹಾಗೂ ರೈತಕಲ್ಯಾಣ ಮಂತ್ರಾಲಯದ ತೋಟಗಾರಿಕಾ ಆಯುಕ್ತರು ಕೊಚಿನ್ ನಲ್ಲಿರುವ ಗೇರು ಹಾಗೂ ಕೋಕೋ ಅಭಿವೃದ್ಧಿಯ ನಿರ್ದೇಶಕರ ಶಿಫಾರಿಸ್ಸಿನ ಮೇರೆಗೆ ಈ ನೇಮಕಾತಿಯನ್ನು ಮಾಡಿರುತ್ತಾರೆ.

ಡಾ ಯಂ.ಜಿ. ನಾಯಕ್ ರವರು ಕಳೆದ 30 ವರ್ಷಗಳಿಂದ ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ತೋಟಗಾರಿಕಾ ವಿಜ್ಞಾನಿಯಾಗಿದ್ದು ತಳಿ ಅಭಿವೃದ್ಧಿ, ವೈವಿಧ್ಯತೆ ಸಂರಕ್ಷಣೆ, ಪುನಶ್ಚೇತನ, ಸಾಂದ್ರ ಮತ್ತು ಘನ ಸಾಂದ್ರ ಗೇರು ಕೃಷಿ ಪದ್ದತಿ, ಗೇರು ನರ್ಸರಿ ಹಾಗೂ ಯೋಗ್ಯ ತಳಿಗಳ ಗಿಡಗಳನ್ನು ರೈತರಿಗೆ ಒದಗಿಸುವುದು, ರೈತರಿಗೆ ಹಾಗೂ ಅಭಿವೃದ್ಧಿ ಇಲಾಖೆಗಳಿಗೆ ಮಾಹಿತಿ ಹಾಗೂ ಸಲಹೆ ನೀಡುವಿಕೆ ಮೂಲಕ ಗೇರು ಅಭಿವೃದ್ಧಿಗೆ ಮಹತ್ತರ ಕೊಡುಗೆಯನ್ನು ಕೊಟ್ಟಿರುತ್ತಾರೆ. ರೈತರೊಂದಿಗೆ ನೇರ ಸಂಪರ್ಕ ಹಾಗೂ ಕೃಷಿ ವಿಸ್ತರಣೆಯಲ್ಲಿ ಬಹಳಷ್ಟು ಶ್ರಮಿಸಿರುತ್ತಾರೆ. ಗೇರು ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಯ ಸದಸ್ಯತ್ವ ಇದೀಗ ಇವರ ಸಾಧನೆಗೆ ಹಿಡಿದ ಕೈಗನ್ನಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್
July 31, 2026
10:20 AM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿ ರಫ್ತು ಪಟ್ಟಿಯಲ್ಲಿ ಈಗ 500ಕ್ಕೂ ಹೆಚ್ಚು ಉತ್ಪನ್ನಗಳು..! ಭಾರತದ ಕೃಷಿ ಕ್ಷೇತ್ರಕ್ಕೆ ಇದು ದೊಡ್ಡ ಸುದ್ದಿ-ರೈತರಿಗೆ ಹೊಸ ಜಾಗತಿಕ ಅವಕಾಶ
July 31, 2026
10:02 AM
by: ದ ರೂರಲ್ ಮಿರರ್.ಕಾಂ
ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ
July 31, 2026
9:45 AM
by: ದ ರೂರಲ್ ಮಿರರ್.ಕಾಂ
ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ
July 31, 2026
7:23 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror