ಪುತ್ತೂರು: ಕರ್ನಾಟಕ ಸರಕಾರದ ಅರಣ್ಯ ಇಲಾಖೆಯ ಆಧೀನದಲ್ಲಿರುವ ಗೇರು ಅಭಿವೃದ್ಧಿ ನಿಗಮದ ನೂತನ ಆಡಳಿತ ಮಂಡಳಿಗೆ ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯದ ಪ್ರಧಾನ ವಿಜ್ಞಾನಿ ಹಾಗೂ ಪ್ರಭಾರ ನಿರ್ದೇಶಕ ಡಾ. ಯಂ. ಗಂಗಾಧರ ನಾಯಕ್ ರವರು ಕೇಂದ್ರ ಸರಕಾರ ನಾಮ ನಿರ್ದೇಶನದನ್ವಯ ಪ್ರತಿನಿಧಿಯಾಗಿ ಆಯ್ಕೆಯಾಗಿರುತ್ತಾರೆ.
ಕೇಂದ್ರ ಸರಕಾರದ ಕೃಷಿ ಹಾಗೂ ರೈತಕಲ್ಯಾಣ ಮಂತ್ರಾಲಯದ ತೋಟಗಾರಿಕಾ ಆಯುಕ್ತರು ಕೊಚಿನ್ ನಲ್ಲಿರುವ ಗೇರು ಹಾಗೂ ಕೋಕೋ ಅಭಿವೃದ್ಧಿಯ ನಿರ್ದೇಶಕರ ಶಿಫಾರಿಸ್ಸಿನ ಮೇರೆಗೆ ಈ ನೇಮಕಾತಿಯನ್ನು ಮಾಡಿರುತ್ತಾರೆ.
ಡಾ ಯಂ.ಜಿ. ನಾಯಕ್ ರವರು ಕಳೆದ 30 ವರ್ಷಗಳಿಂದ ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ತೋಟಗಾರಿಕಾ ವಿಜ್ಞಾನಿಯಾಗಿದ್ದು ತಳಿ ಅಭಿವೃದ್ಧಿ, ವೈವಿಧ್ಯತೆ ಸಂರಕ್ಷಣೆ, ಪುನಶ್ಚೇತನ, ಸಾಂದ್ರ ಮತ್ತು ಘನ ಸಾಂದ್ರ ಗೇರು ಕೃಷಿ ಪದ್ದತಿ, ಗೇರು ನರ್ಸರಿ ಹಾಗೂ ಯೋಗ್ಯ ತಳಿಗಳ ಗಿಡಗಳನ್ನು ರೈತರಿಗೆ ಒದಗಿಸುವುದು, ರೈತರಿಗೆ ಹಾಗೂ ಅಭಿವೃದ್ಧಿ ಇಲಾಖೆಗಳಿಗೆ ಮಾಹಿತಿ ಹಾಗೂ ಸಲಹೆ ನೀಡುವಿಕೆ ಮೂಲಕ ಗೇರು ಅಭಿವೃದ್ಧಿಗೆ ಮಹತ್ತರ ಕೊಡುಗೆಯನ್ನು ಕೊಟ್ಟಿರುತ್ತಾರೆ. ರೈತರೊಂದಿಗೆ ನೇರ ಸಂಪರ್ಕ ಹಾಗೂ ಕೃಷಿ ವಿಸ್ತರಣೆಯಲ್ಲಿ ಬಹಳಷ್ಟು ಶ್ರಮಿಸಿರುತ್ತಾರೆ. ಗೇರು ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಯ ಸದಸ್ಯತ್ವ ಇದೀಗ ಇವರ ಸಾಧನೆಗೆ ಹಿಡಿದ ಕೈಗನ್ನಡಿ.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…