ಪುತ್ತೂರು: ಕರ್ನಾಟಕ ಸರಕಾರದ ಅರಣ್ಯ ಇಲಾಖೆಯ ಆಧೀನದಲ್ಲಿರುವ ಗೇರು ಅಭಿವೃದ್ಧಿ ನಿಗಮದ ನೂತನ ಆಡಳಿತ ಮಂಡಳಿಗೆ ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯದ ಪ್ರಧಾನ ವಿಜ್ಞಾನಿ ಹಾಗೂ ಪ್ರಭಾರ ನಿರ್ದೇಶಕ ಡಾ. ಯಂ. ಗಂಗಾಧರ ನಾಯಕ್ ರವರು ಕೇಂದ್ರ ಸರಕಾರ ನಾಮ ನಿರ್ದೇಶನದನ್ವಯ ಪ್ರತಿನಿಧಿಯಾಗಿ ಆಯ್ಕೆಯಾಗಿರುತ್ತಾರೆ.
ಕೇಂದ್ರ ಸರಕಾರದ ಕೃಷಿ ಹಾಗೂ ರೈತಕಲ್ಯಾಣ ಮಂತ್ರಾಲಯದ ತೋಟಗಾರಿಕಾ ಆಯುಕ್ತರು ಕೊಚಿನ್ ನಲ್ಲಿರುವ ಗೇರು ಹಾಗೂ ಕೋಕೋ ಅಭಿವೃದ್ಧಿಯ ನಿರ್ದೇಶಕರ ಶಿಫಾರಿಸ್ಸಿನ ಮೇರೆಗೆ ಈ ನೇಮಕಾತಿಯನ್ನು ಮಾಡಿರುತ್ತಾರೆ.
ಡಾ ಯಂ.ಜಿ. ನಾಯಕ್ ರವರು ಕಳೆದ 30 ವರ್ಷಗಳಿಂದ ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ತೋಟಗಾರಿಕಾ ವಿಜ್ಞಾನಿಯಾಗಿದ್ದು ತಳಿ ಅಭಿವೃದ್ಧಿ, ವೈವಿಧ್ಯತೆ ಸಂರಕ್ಷಣೆ, ಪುನಶ್ಚೇತನ, ಸಾಂದ್ರ ಮತ್ತು ಘನ ಸಾಂದ್ರ ಗೇರು ಕೃಷಿ ಪದ್ದತಿ, ಗೇರು ನರ್ಸರಿ ಹಾಗೂ ಯೋಗ್ಯ ತಳಿಗಳ ಗಿಡಗಳನ್ನು ರೈತರಿಗೆ ಒದಗಿಸುವುದು, ರೈತರಿಗೆ ಹಾಗೂ ಅಭಿವೃದ್ಧಿ ಇಲಾಖೆಗಳಿಗೆ ಮಾಹಿತಿ ಹಾಗೂ ಸಲಹೆ ನೀಡುವಿಕೆ ಮೂಲಕ ಗೇರು ಅಭಿವೃದ್ಧಿಗೆ ಮಹತ್ತರ ಕೊಡುಗೆಯನ್ನು ಕೊಟ್ಟಿರುತ್ತಾರೆ. ರೈತರೊಂದಿಗೆ ನೇರ ಸಂಪರ್ಕ ಹಾಗೂ ಕೃಷಿ ವಿಸ್ತರಣೆಯಲ್ಲಿ ಬಹಳಷ್ಟು ಶ್ರಮಿಸಿರುತ್ತಾರೆ. ಗೇರು ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಯ ಸದಸ್ಯತ್ವ ಇದೀಗ ಇವರ ಸಾಧನೆಗೆ ಹಿಡಿದ ಕೈಗನ್ನಡಿ.
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…