ಪುತ್ತೂರು: ಕರ್ನಾಟಕ ಸರಕಾರದ ಅರಣ್ಯ ಇಲಾಖೆಯ ಆಧೀನದಲ್ಲಿರುವ ಗೇರು ಅಭಿವೃದ್ಧಿ ನಿಗಮದ ನೂತನ ಆಡಳಿತ ಮಂಡಳಿಗೆ ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯದ ಪ್ರಧಾನ ವಿಜ್ಞಾನಿ ಹಾಗೂ ಪ್ರಭಾರ ನಿರ್ದೇಶಕ ಡಾ. ಯಂ. ಗಂಗಾಧರ ನಾಯಕ್ ರವರು ಕೇಂದ್ರ ಸರಕಾರ ನಾಮ ನಿರ್ದೇಶನದನ್ವಯ ಪ್ರತಿನಿಧಿಯಾಗಿ ಆಯ್ಕೆಯಾಗಿರುತ್ತಾರೆ.
ಕೇಂದ್ರ ಸರಕಾರದ ಕೃಷಿ ಹಾಗೂ ರೈತಕಲ್ಯಾಣ ಮಂತ್ರಾಲಯದ ತೋಟಗಾರಿಕಾ ಆಯುಕ್ತರು ಕೊಚಿನ್ ನಲ್ಲಿರುವ ಗೇರು ಹಾಗೂ ಕೋಕೋ ಅಭಿವೃದ್ಧಿಯ ನಿರ್ದೇಶಕರ ಶಿಫಾರಿಸ್ಸಿನ ಮೇರೆಗೆ ಈ ನೇಮಕಾತಿಯನ್ನು ಮಾಡಿರುತ್ತಾರೆ.
ಡಾ ಯಂ.ಜಿ. ನಾಯಕ್ ರವರು ಕಳೆದ 30 ವರ್ಷಗಳಿಂದ ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ತೋಟಗಾರಿಕಾ ವಿಜ್ಞಾನಿಯಾಗಿದ್ದು ತಳಿ ಅಭಿವೃದ್ಧಿ, ವೈವಿಧ್ಯತೆ ಸಂರಕ್ಷಣೆ, ಪುನಶ್ಚೇತನ, ಸಾಂದ್ರ ಮತ್ತು ಘನ ಸಾಂದ್ರ ಗೇರು ಕೃಷಿ ಪದ್ದತಿ, ಗೇರು ನರ್ಸರಿ ಹಾಗೂ ಯೋಗ್ಯ ತಳಿಗಳ ಗಿಡಗಳನ್ನು ರೈತರಿಗೆ ಒದಗಿಸುವುದು, ರೈತರಿಗೆ ಹಾಗೂ ಅಭಿವೃದ್ಧಿ ಇಲಾಖೆಗಳಿಗೆ ಮಾಹಿತಿ ಹಾಗೂ ಸಲಹೆ ನೀಡುವಿಕೆ ಮೂಲಕ ಗೇರು ಅಭಿವೃದ್ಧಿಗೆ ಮಹತ್ತರ ಕೊಡುಗೆಯನ್ನು ಕೊಟ್ಟಿರುತ್ತಾರೆ. ರೈತರೊಂದಿಗೆ ನೇರ ಸಂಪರ್ಕ ಹಾಗೂ ಕೃಷಿ ವಿಸ್ತರಣೆಯಲ್ಲಿ ಬಹಳಷ್ಟು ಶ್ರಮಿಸಿರುತ್ತಾರೆ. ಗೇರು ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಯ ಸದಸ್ಯತ್ವ ಇದೀಗ ಇವರ ಸಾಧನೆಗೆ ಹಿಡಿದ ಕೈಗನ್ನಡಿ.
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…