Advertisement
ಸುದ್ದಿಗಳು

ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಡಾ. ಯಂ.ಜಿ. ನಾಯಕ್

Share

ಪುತ್ತೂರು: ಕರ್ನಾಟಕ ಸರಕಾರದ ಅರಣ್ಯ ಇಲಾಖೆಯ ಆಧೀನದಲ್ಲಿರುವ ಗೇರು ಅಭಿವೃದ್ಧಿ ನಿಗಮದ ನೂತನ ಆಡಳಿತ ಮಂಡಳಿಗೆ ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯದ ಪ್ರಧಾನ ವಿಜ್ಞಾನಿ ಹಾಗೂ ಪ್ರಭಾರ ನಿರ್ದೇಶಕ ಡಾ. ಯಂ. ಗಂಗಾಧರ ನಾಯಕ್ ರವರು ಕೇಂದ್ರ ಸರಕಾರ ನಾಮ ನಿರ್ದೇಶನದನ್ವಯ ಪ್ರತಿನಿಧಿಯಾಗಿ ಆಯ್ಕೆಯಾಗಿರುತ್ತಾರೆ.

ಕೇಂದ್ರ ಸರಕಾರದ ಕೃಷಿ ಹಾಗೂ ರೈತಕಲ್ಯಾಣ ಮಂತ್ರಾಲಯದ ತೋಟಗಾರಿಕಾ ಆಯುಕ್ತರು ಕೊಚಿನ್ ನಲ್ಲಿರುವ ಗೇರು ಹಾಗೂ ಕೋಕೋ ಅಭಿವೃದ್ಧಿಯ ನಿರ್ದೇಶಕರ ಶಿಫಾರಿಸ್ಸಿನ ಮೇರೆಗೆ ಈ ನೇಮಕಾತಿಯನ್ನು ಮಾಡಿರುತ್ತಾರೆ.

ಡಾ ಯಂ.ಜಿ. ನಾಯಕ್ ರವರು ಕಳೆದ 30 ವರ್ಷಗಳಿಂದ ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ತೋಟಗಾರಿಕಾ ವಿಜ್ಞಾನಿಯಾಗಿದ್ದು ತಳಿ ಅಭಿವೃದ್ಧಿ, ವೈವಿಧ್ಯತೆ ಸಂರಕ್ಷಣೆ, ಪುನಶ್ಚೇತನ, ಸಾಂದ್ರ ಮತ್ತು ಘನ ಸಾಂದ್ರ ಗೇರು ಕೃಷಿ ಪದ್ದತಿ, ಗೇರು ನರ್ಸರಿ ಹಾಗೂ ಯೋಗ್ಯ ತಳಿಗಳ ಗಿಡಗಳನ್ನು ರೈತರಿಗೆ ಒದಗಿಸುವುದು, ರೈತರಿಗೆ ಹಾಗೂ ಅಭಿವೃದ್ಧಿ ಇಲಾಖೆಗಳಿಗೆ ಮಾಹಿತಿ ಹಾಗೂ ಸಲಹೆ ನೀಡುವಿಕೆ ಮೂಲಕ ಗೇರು ಅಭಿವೃದ್ಧಿಗೆ ಮಹತ್ತರ ಕೊಡುಗೆಯನ್ನು ಕೊಟ್ಟಿರುತ್ತಾರೆ. ರೈತರೊಂದಿಗೆ ನೇರ ಸಂಪರ್ಕ ಹಾಗೂ ಕೃಷಿ ವಿಸ್ತರಣೆಯಲ್ಲಿ ಬಹಳಷ್ಟು ಶ್ರಮಿಸಿರುತ್ತಾರೆ. ಗೇರು ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಯ ಸದಸ್ಯತ್ವ ಇದೀಗ ಇವರ ಸಾಧನೆಗೆ ಹಿಡಿದ ಕೈಗನ್ನಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

5 hours ago

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

7 hours ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

11 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

14 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

15 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

1 day ago