ಪುತ್ತೂರು: ಕರ್ನಾಟಕ ಸರಕಾರದ ಅರಣ್ಯ ಇಲಾಖೆಯ ಆಧೀನದಲ್ಲಿರುವ ಗೇರು ಅಭಿವೃದ್ಧಿ ನಿಗಮದ ನೂತನ ಆಡಳಿತ ಮಂಡಳಿಗೆ ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯದ ಪ್ರಧಾನ ವಿಜ್ಞಾನಿ ಹಾಗೂ ಪ್ರಭಾರ ನಿರ್ದೇಶಕ ಡಾ. ಯಂ. ಗಂಗಾಧರ ನಾಯಕ್ ರವರು ಕೇಂದ್ರ ಸರಕಾರ ನಾಮ ನಿರ್ದೇಶನದನ್ವಯ ಪ್ರತಿನಿಧಿಯಾಗಿ ಆಯ್ಕೆಯಾಗಿರುತ್ತಾರೆ.
ಕೇಂದ್ರ ಸರಕಾರದ ಕೃಷಿ ಹಾಗೂ ರೈತಕಲ್ಯಾಣ ಮಂತ್ರಾಲಯದ ತೋಟಗಾರಿಕಾ ಆಯುಕ್ತರು ಕೊಚಿನ್ ನಲ್ಲಿರುವ ಗೇರು ಹಾಗೂ ಕೋಕೋ ಅಭಿವೃದ್ಧಿಯ ನಿರ್ದೇಶಕರ ಶಿಫಾರಿಸ್ಸಿನ ಮೇರೆಗೆ ಈ ನೇಮಕಾತಿಯನ್ನು ಮಾಡಿರುತ್ತಾರೆ.
ಡಾ ಯಂ.ಜಿ. ನಾಯಕ್ ರವರು ಕಳೆದ 30 ವರ್ಷಗಳಿಂದ ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ತೋಟಗಾರಿಕಾ ವಿಜ್ಞಾನಿಯಾಗಿದ್ದು ತಳಿ ಅಭಿವೃದ್ಧಿ, ವೈವಿಧ್ಯತೆ ಸಂರಕ್ಷಣೆ, ಪುನಶ್ಚೇತನ, ಸಾಂದ್ರ ಮತ್ತು ಘನ ಸಾಂದ್ರ ಗೇರು ಕೃಷಿ ಪದ್ದತಿ, ಗೇರು ನರ್ಸರಿ ಹಾಗೂ ಯೋಗ್ಯ ತಳಿಗಳ ಗಿಡಗಳನ್ನು ರೈತರಿಗೆ ಒದಗಿಸುವುದು, ರೈತರಿಗೆ ಹಾಗೂ ಅಭಿವೃದ್ಧಿ ಇಲಾಖೆಗಳಿಗೆ ಮಾಹಿತಿ ಹಾಗೂ ಸಲಹೆ ನೀಡುವಿಕೆ ಮೂಲಕ ಗೇರು ಅಭಿವೃದ್ಧಿಗೆ ಮಹತ್ತರ ಕೊಡುಗೆಯನ್ನು ಕೊಟ್ಟಿರುತ್ತಾರೆ. ರೈತರೊಂದಿಗೆ ನೇರ ಸಂಪರ್ಕ ಹಾಗೂ ಕೃಷಿ ವಿಸ್ತರಣೆಯಲ್ಲಿ ಬಹಳಷ್ಟು ಶ್ರಮಿಸಿರುತ್ತಾರೆ. ಗೇರು ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಯ ಸದಸ್ಯತ್ವ ಇದೀಗ ಇವರ ಸಾಧನೆಗೆ ಹಿಡಿದ ಕೈಗನ್ನಡಿ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…