ಪುತ್ತೂರು: ಕರ್ನಾಟಕ ಸರಕಾರದ ಅರಣ್ಯ ಇಲಾಖೆಯ ಆಧೀನದಲ್ಲಿರುವ ಗೇರು ಅಭಿವೃದ್ಧಿ ನಿಗಮದ ನೂತನ ಆಡಳಿತ ಮಂಡಳಿಗೆ ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯದ ಪ್ರಧಾನ ವಿಜ್ಞಾನಿ ಹಾಗೂ ಪ್ರಭಾರ ನಿರ್ದೇಶಕ ಡಾ. ಯಂ. ಗಂಗಾಧರ ನಾಯಕ್ ರವರು ಕೇಂದ್ರ ಸರಕಾರ ನಾಮ ನಿರ್ದೇಶನದನ್ವಯ ಪ್ರತಿನಿಧಿಯಾಗಿ ಆಯ್ಕೆಯಾಗಿರುತ್ತಾರೆ.
ಕೇಂದ್ರ ಸರಕಾರದ ಕೃಷಿ ಹಾಗೂ ರೈತಕಲ್ಯಾಣ ಮಂತ್ರಾಲಯದ ತೋಟಗಾರಿಕಾ ಆಯುಕ್ತರು ಕೊಚಿನ್ ನಲ್ಲಿರುವ ಗೇರು ಹಾಗೂ ಕೋಕೋ ಅಭಿವೃದ್ಧಿಯ ನಿರ್ದೇಶಕರ ಶಿಫಾರಿಸ್ಸಿನ ಮೇರೆಗೆ ಈ ನೇಮಕಾತಿಯನ್ನು ಮಾಡಿರುತ್ತಾರೆ.
ಡಾ ಯಂ.ಜಿ. ನಾಯಕ್ ರವರು ಕಳೆದ 30 ವರ್ಷಗಳಿಂದ ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ತೋಟಗಾರಿಕಾ ವಿಜ್ಞಾನಿಯಾಗಿದ್ದು ತಳಿ ಅಭಿವೃದ್ಧಿ, ವೈವಿಧ್ಯತೆ ಸಂರಕ್ಷಣೆ, ಪುನಶ್ಚೇತನ, ಸಾಂದ್ರ ಮತ್ತು ಘನ ಸಾಂದ್ರ ಗೇರು ಕೃಷಿ ಪದ್ದತಿ, ಗೇರು ನರ್ಸರಿ ಹಾಗೂ ಯೋಗ್ಯ ತಳಿಗಳ ಗಿಡಗಳನ್ನು ರೈತರಿಗೆ ಒದಗಿಸುವುದು, ರೈತರಿಗೆ ಹಾಗೂ ಅಭಿವೃದ್ಧಿ ಇಲಾಖೆಗಳಿಗೆ ಮಾಹಿತಿ ಹಾಗೂ ಸಲಹೆ ನೀಡುವಿಕೆ ಮೂಲಕ ಗೇರು ಅಭಿವೃದ್ಧಿಗೆ ಮಹತ್ತರ ಕೊಡುಗೆಯನ್ನು ಕೊಟ್ಟಿರುತ್ತಾರೆ. ರೈತರೊಂದಿಗೆ ನೇರ ಸಂಪರ್ಕ ಹಾಗೂ ಕೃಷಿ ವಿಸ್ತರಣೆಯಲ್ಲಿ ಬಹಳಷ್ಟು ಶ್ರಮಿಸಿರುತ್ತಾರೆ. ಗೇರು ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಯ ಸದಸ್ಯತ್ವ ಇದೀಗ ಇವರ ಸಾಧನೆಗೆ ಹಿಡಿದ ಕೈಗನ್ನಡಿ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…