ಸುಳ್ಯ: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಹಾಗೂ ಸುಳ್ಯದ ಶ್ರೀ ಶಾರದಾ ಮಹಿಳಾ ಮಹಾವಿದ್ಯಾಲಯದ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಸುಳ್ಯದ ಜ್ಯೋತಿ ಸರ್ಕಲ್ ಬಳಿಯಿರುವ ಅಮೃತಭವನದಲ್ಲಿ ಜರುಗಿತು.
ವಾರ್ತಾಧಿಕಾರಿ ಖಾದರ್ ಷಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಡಿಕೇರಿ ಶಕ್ತಿ ಪತ್ರಿಕೆಯ ಸಂಪಾದಕ ಚಿದ್ವಿಲಾಸ್ ಉಪನ್ಯಾಸ ನೀಡಿದರು.
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ.ರ.ಸಾ.ಸಂಸ್ಥೆಯ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಅಶ್ರಫ್ ಕೆ.ಎಂ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಎನ್.ಎ.ಕುಂಞಿ ಅಹ್ಮದ್, ದ.ಕ.ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಘಟಕದ ಅಧ್ಯಕ್ಷ ಹರೀಶ್ ಬಂಟ್ವಾಳ್, ಜೆ.ಕೆ.ರೈ ಸುಳ್ಯ, ಶಾರದಾ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲೆ ಜ್ಯೋತ್ಸ್ನಾ , ಸುಳ್ಯ ತಾಲೂಕು ಘಟಕದ ಕಾರ್ಯದರ್ಶಿ ಬಾಲಕೃಷ್ಣ ಭೀಮಗುಳಿ ಉಪಸ್ಥಿತರಿದ್ದರು. ಪತ್ರಕರ್ತ ಡಾ. ಯು.ಪಿ.ಶಿವಾನಂದ ಸನ್ಮಾನ ನೆರವೇರಿಸಿದರು. ರಕ್ತದಾನಿ ಪಿ.ಬಿ.ಸುಧಾಕರ ರೈ, ಪತ್ರಕರ್ತ ರವಿರಾಜ್ ವಳಲಂಬೆ, ಡಾ.ಹಿಮಕರ್, ರೇಡಿಯೋ ಜಾಕಿ ತ್ರಿಶೂಲ್ ಕಂಬಳ, ಪತ್ರಿಕಾ ವಿತರಕ ರಾಧಾಕೃಷ್ಣ ಜಯನಗರ, ನಾಟಿವೈದ್ಯೆ ಸರಸ್ವತಿ ಆಚಾರ್ಯ ಕಾವಿನಮೂಲೆ, ಮಡಪ್ಪಾಡಿ ಮಹಾತ್ಮಾ ಗಾಂಧಿ ಸೇವಾ ಸಂಘದ ಎಂ.ಡಿ. ವಿಜಯಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…