ಸುಳ್ಯ: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಹಾಗೂ ಸುಳ್ಯದ ಶ್ರೀ ಶಾರದಾ ಮಹಿಳಾ ಮಹಾವಿದ್ಯಾಲಯದ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಸುಳ್ಯದ ಜ್ಯೋತಿ ಸರ್ಕಲ್ ಬಳಿಯಿರುವ ಅಮೃತಭವನದಲ್ಲಿ ಜರುಗಿತು.
ವಾರ್ತಾಧಿಕಾರಿ ಖಾದರ್ ಷಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಡಿಕೇರಿ ಶಕ್ತಿ ಪತ್ರಿಕೆಯ ಸಂಪಾದಕ ಚಿದ್ವಿಲಾಸ್ ಉಪನ್ಯಾಸ ನೀಡಿದರು.
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ.ರ.ಸಾ.ಸಂಸ್ಥೆಯ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಅಶ್ರಫ್ ಕೆ.ಎಂ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಎನ್.ಎ.ಕುಂಞಿ ಅಹ್ಮದ್, ದ.ಕ.ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಘಟಕದ ಅಧ್ಯಕ್ಷ ಹರೀಶ್ ಬಂಟ್ವಾಳ್, ಜೆ.ಕೆ.ರೈ ಸುಳ್ಯ, ಶಾರದಾ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲೆ ಜ್ಯೋತ್ಸ್ನಾ , ಸುಳ್ಯ ತಾಲೂಕು ಘಟಕದ ಕಾರ್ಯದರ್ಶಿ ಬಾಲಕೃಷ್ಣ ಭೀಮಗುಳಿ ಉಪಸ್ಥಿತರಿದ್ದರು. ಪತ್ರಕರ್ತ ಡಾ. ಯು.ಪಿ.ಶಿವಾನಂದ ಸನ್ಮಾನ ನೆರವೇರಿಸಿದರು. ರಕ್ತದಾನಿ ಪಿ.ಬಿ.ಸುಧಾಕರ ರೈ, ಪತ್ರಕರ್ತ ರವಿರಾಜ್ ವಳಲಂಬೆ, ಡಾ.ಹಿಮಕರ್, ರೇಡಿಯೋ ಜಾಕಿ ತ್ರಿಶೂಲ್ ಕಂಬಳ, ಪತ್ರಿಕಾ ವಿತರಕ ರಾಧಾಕೃಷ್ಣ ಜಯನಗರ, ನಾಟಿವೈದ್ಯೆ ಸರಸ್ವತಿ ಆಚಾರ್ಯ ಕಾವಿನಮೂಲೆ, ಮಡಪ್ಪಾಡಿ ಮಹಾತ್ಮಾ ಗಾಂಧಿ ಸೇವಾ ಸಂಘದ ಎಂ.ಡಿ. ವಿಜಯಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…