ಸುದ್ದಿಗಳು

ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿಯಿಂದ ಓಣಂ ಆಚರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ಸುಳ್ಯ ಕರಯೋಗಂ ವತಿಯಿಂದ ಓಣಂ ಆಚರಣೆ ಸುಳ್ಯದ ಗಿರಿದರ್ಶಿನಿ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಹಿರಿಯ ಪಿಡಬ್ಲ್ಯೂಡಿ ಗುತ್ತಿಗೆದಾರ ಕಾರಡ್ಕದ ಕೆ. ಗಂಗಾಧರನ್ ನಾಯರ್ ಉದ್ಘಾಟಿಸಿದರು.

Advertisement
Advertisement

ಸಾಮಾಜಿಕ ಧುರೀಣ ಕೆ.ಕೆ.ವೇಣುಗೋಪಾಲ್ ಬಳಾಂತೋಡು ಮುಖ್ಯ ಅತಿಥಿಯಾಗಿದ್ದರು. ಸುಳ್ಯ ಕರಯೋಗಂ ಅಧ್ಯಕ್ಷ ಚಂದ್ರಶೇಖರ ಉಬರಡ್ಕ ಅಧ್ಯಕ್ಷತೆ ವಹಿಸಿದ್ದರು. ಗೌರವ ಡಾಕ್ಟರೇಟ್ ಪಡೆದ ಪಂಜ ಪಂಚಲಿಂಗೇಶ್ವರ ದೇಗುಲದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರ್ ಆವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕೆಎನ್‍ಎಸ್‍ಎಸ್ ಸುಳ್ಯ ಕರಯೋಗಂ ಮಾಹಿತಿ ಡೈರಿಯನ್ನು ಬಿಡುಗಡೆಗೊಳಿಸಲಾಯಿತು.

ರಿಯಾಲಿಟಿ ಶೋ ಪ್ರತಿಭೆ ವೈಷ್ಣವಿ, ಸ್ಕೌಟ್ ಪುರಸ್ಕಾರ ಪಡೆದ ಶ್ರೀಲಾಲ್, ಸಂಗೀತದಲ್ಲಿ ಡಿಸ್ಟಿಂಕ್ಷನ್ ಪಡೆದ ಶ್ರೀಲಯ, ಇಂಟಿಗ್ರೇಟೆಡ್ ಪಿಎಚ್‍ಡಿಗೆ ಆಯ್ಕೆಗೊಂಡ ಅಭಿಜ್ಞಾ ಕುತ್ತಮೊಟ್ಟೆಯವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಮಂಗಳೂರು ಕರಯೋಗಂನ ರಾಜನ್ ನಂಬಿಯಾರ್ ಶುಭ ಹಾರೈಸಿದರು. ಸುಳ್ಯ ಕರಯೋಗಂ ಉಪಾಧ್ಯಕ್ಷ ಚಂದ್ರಶೇಖರ್ ನಾಯರ್ ಸುಬ್ರಹ್ಮಣ್ಯ, ಕೋಶಾಧಿಕಾರಿ ವಿಶ್ವನಾಥನ್ ನಾಯರ್, ಮಹಿಳಾ ವಿಭಾಗದ ಅಧ್ಯಕ್ಷೆ ವೀಣಾ ಪ್ರಭಾಕರನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ಆಶಿಕಾ ಚಂದ್ರಶೇಖರ್ ಪ್ರಾರ್ಥಿಸಿದರು. ಪೂರ್ವಾಧ್ಯಕ್ಷರಾದ ಪ್ರಭಾಕರನ್ ನಾಯರ್ ಸ್ವಾಗತಿಸಿ, ಬಾಲಕೃಷ್ಣನ್ ನಾಯರ್ ಪ್ರಸ್ತಾವನೆಗೈದರು. ದುರ್ಗಾಕುಮಾರ್ ನಾಯರ್ ಕೆರೆ  ಅಭಿನಂದನಾ ಭಾಷಣಗೈದರು. ಕಾರ್ಯದರ್ಶಿ ಪ್ರಿಯರಂಜನ್ ನಾಯರ್ ವಂದಿಸಿದರು. ಅಂಬಿಕಾ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು. ಓಣಂ ಕಾರ್ಯಕ್ರಮದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ವರ್ಮುಡಿ ಅವರಿಗೆ ಮತ್ತೊಮ್ಮೆ ಅಂತರಾಷ್ಟ್ರೀಯ ಮನ್ನಣೆ

ಡಾ. ವಿಘ್ನೇಶ್ವರ ವರ್ಮುಡಿ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿದ್ದ ಲೇಖನಗಳನ್ನು ವಿಶ್ವದ ಬೇರೆ…

8 minutes ago

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ

ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ…

28 minutes ago

ಗಜಲಕ್ಷ್ಮೀ ರಾಜಯೋಗ – ಕೆಲವು ರಾಶಿಯವರಿಗೆ ಅದೃಷ್ಟ- ಸಿಗುವುದು ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

32 minutes ago

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

10 hours ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

10 hours ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

11 hours ago