ಸುಳ್ಯ: ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ಸುಳ್ಯ ಕರಯೋಗಂ ವತಿಯಿಂದ ಓಣಂ ಆಚರಣೆ ಸುಳ್ಯದ ಗಿರಿದರ್ಶಿನಿ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಹಿರಿಯ ಪಿಡಬ್ಲ್ಯೂಡಿ ಗುತ್ತಿಗೆದಾರ ಕಾರಡ್ಕದ ಕೆ. ಗಂಗಾಧರನ್ ನಾಯರ್ ಉದ್ಘಾಟಿಸಿದರು.
ಸಾಮಾಜಿಕ ಧುರೀಣ ಕೆ.ಕೆ.ವೇಣುಗೋಪಾಲ್ ಬಳಾಂತೋಡು ಮುಖ್ಯ ಅತಿಥಿಯಾಗಿದ್ದರು. ಸುಳ್ಯ ಕರಯೋಗಂ ಅಧ್ಯಕ್ಷ ಚಂದ್ರಶೇಖರ ಉಬರಡ್ಕ ಅಧ್ಯಕ್ಷತೆ ವಹಿಸಿದ್ದರು. ಗೌರವ ಡಾಕ್ಟರೇಟ್ ಪಡೆದ ಪಂಜ ಪಂಚಲಿಂಗೇಶ್ವರ ದೇಗುಲದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರ್ ಆವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕೆಎನ್ಎಸ್ಎಸ್ ಸುಳ್ಯ ಕರಯೋಗಂ ಮಾಹಿತಿ ಡೈರಿಯನ್ನು ಬಿಡುಗಡೆಗೊಳಿಸಲಾಯಿತು.
ರಿಯಾಲಿಟಿ ಶೋ ಪ್ರತಿಭೆ ವೈಷ್ಣವಿ, ಸ್ಕೌಟ್ ಪುರಸ್ಕಾರ ಪಡೆದ ಶ್ರೀಲಾಲ್, ಸಂಗೀತದಲ್ಲಿ ಡಿಸ್ಟಿಂಕ್ಷನ್ ಪಡೆದ ಶ್ರೀಲಯ, ಇಂಟಿಗ್ರೇಟೆಡ್ ಪಿಎಚ್ಡಿಗೆ ಆಯ್ಕೆಗೊಂಡ ಅಭಿಜ್ಞಾ ಕುತ್ತಮೊಟ್ಟೆಯವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಮಂಗಳೂರು ಕರಯೋಗಂನ ರಾಜನ್ ನಂಬಿಯಾರ್ ಶುಭ ಹಾರೈಸಿದರು. ಸುಳ್ಯ ಕರಯೋಗಂ ಉಪಾಧ್ಯಕ್ಷ ಚಂದ್ರಶೇಖರ್ ನಾಯರ್ ಸುಬ್ರಹ್ಮಣ್ಯ, ಕೋಶಾಧಿಕಾರಿ ವಿಶ್ವನಾಥನ್ ನಾಯರ್, ಮಹಿಳಾ ವಿಭಾಗದ ಅಧ್ಯಕ್ಷೆ ವೀಣಾ ಪ್ರಭಾಕರನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆಶಿಕಾ ಚಂದ್ರಶೇಖರ್ ಪ್ರಾರ್ಥಿಸಿದರು. ಪೂರ್ವಾಧ್ಯಕ್ಷರಾದ ಪ್ರಭಾಕರನ್ ನಾಯರ್ ಸ್ವಾಗತಿಸಿ, ಬಾಲಕೃಷ್ಣನ್ ನಾಯರ್ ಪ್ರಸ್ತಾವನೆಗೈದರು. ದುರ್ಗಾಕುಮಾರ್ ನಾಯರ್ ಕೆರೆ ಅಭಿನಂದನಾ ಭಾಷಣಗೈದರು. ಕಾರ್ಯದರ್ಶಿ ಪ್ರಿಯರಂಜನ್ ನಾಯರ್ ವಂದಿಸಿದರು. ಅಂಬಿಕಾ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು. ಓಣಂ ಕಾರ್ಯಕ್ರಮದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…