Advertisement
ಸುದ್ದಿಗಳು

ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿಯಿಂದ ಓಣಂ ಆಚರಣೆ

Share

ಸುಳ್ಯ: ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ಸುಳ್ಯ ಕರಯೋಗಂ ವತಿಯಿಂದ ಓಣಂ ಆಚರಣೆ ಸುಳ್ಯದ ಗಿರಿದರ್ಶಿನಿ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಹಿರಿಯ ಪಿಡಬ್ಲ್ಯೂಡಿ ಗುತ್ತಿಗೆದಾರ ಕಾರಡ್ಕದ ಕೆ. ಗಂಗಾಧರನ್ ನಾಯರ್ ಉದ್ಘಾಟಿಸಿದರು.

ಸಾಮಾಜಿಕ ಧುರೀಣ ಕೆ.ಕೆ.ವೇಣುಗೋಪಾಲ್ ಬಳಾಂತೋಡು ಮುಖ್ಯ ಅತಿಥಿಯಾಗಿದ್ದರು. ಸುಳ್ಯ ಕರಯೋಗಂ ಅಧ್ಯಕ್ಷ ಚಂದ್ರಶೇಖರ ಉಬರಡ್ಕ ಅಧ್ಯಕ್ಷತೆ ವಹಿಸಿದ್ದರು. ಗೌರವ ಡಾಕ್ಟರೇಟ್ ಪಡೆದ ಪಂಜ ಪಂಚಲಿಂಗೇಶ್ವರ ದೇಗುಲದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರ್ ಆವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕೆಎನ್‍ಎಸ್‍ಎಸ್ ಸುಳ್ಯ ಕರಯೋಗಂ ಮಾಹಿತಿ ಡೈರಿಯನ್ನು ಬಿಡುಗಡೆಗೊಳಿಸಲಾಯಿತು.

ರಿಯಾಲಿಟಿ ಶೋ ಪ್ರತಿಭೆ ವೈಷ್ಣವಿ, ಸ್ಕೌಟ್ ಪುರಸ್ಕಾರ ಪಡೆದ ಶ್ರೀಲಾಲ್, ಸಂಗೀತದಲ್ಲಿ ಡಿಸ್ಟಿಂಕ್ಷನ್ ಪಡೆದ ಶ್ರೀಲಯ, ಇಂಟಿಗ್ರೇಟೆಡ್ ಪಿಎಚ್‍ಡಿಗೆ ಆಯ್ಕೆಗೊಂಡ ಅಭಿಜ್ಞಾ ಕುತ್ತಮೊಟ್ಟೆಯವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಮಂಗಳೂರು ಕರಯೋಗಂನ ರಾಜನ್ ನಂಬಿಯಾರ್ ಶುಭ ಹಾರೈಸಿದರು. ಸುಳ್ಯ ಕರಯೋಗಂ ಉಪಾಧ್ಯಕ್ಷ ಚಂದ್ರಶೇಖರ್ ನಾಯರ್ ಸುಬ್ರಹ್ಮಣ್ಯ, ಕೋಶಾಧಿಕಾರಿ ವಿಶ್ವನಾಥನ್ ನಾಯರ್, ಮಹಿಳಾ ವಿಭಾಗದ ಅಧ್ಯಕ್ಷೆ ವೀಣಾ ಪ್ರಭಾಕರನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆಶಿಕಾ ಚಂದ್ರಶೇಖರ್ ಪ್ರಾರ್ಥಿಸಿದರು. ಪೂರ್ವಾಧ್ಯಕ್ಷರಾದ ಪ್ರಭಾಕರನ್ ನಾಯರ್ ಸ್ವಾಗತಿಸಿ, ಬಾಲಕೃಷ್ಣನ್ ನಾಯರ್ ಪ್ರಸ್ತಾವನೆಗೈದರು. ದುರ್ಗಾಕುಮಾರ್ ನಾಯರ್ ಕೆರೆ  ಅಭಿನಂದನಾ ಭಾಷಣಗೈದರು. ಕಾರ್ಯದರ್ಶಿ ಪ್ರಿಯರಂಜನ್ ನಾಯರ್ ವಂದಿಸಿದರು. ಅಂಬಿಕಾ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು. ಓಣಂ ಕಾರ್ಯಕ್ರಮದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

1 hour ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

6 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

9 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

9 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

24 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

1 day ago