ಸುಳ್ಯ: ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ಸುಳ್ಯ ಕರಯೋಗಂ ವತಿಯಿಂದ ಓಣಂ ಆಚರಣೆ ಸುಳ್ಯದ ಗಿರಿದರ್ಶಿನಿ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಹಿರಿಯ ಪಿಡಬ್ಲ್ಯೂಡಿ ಗುತ್ತಿಗೆದಾರ ಕಾರಡ್ಕದ ಕೆ. ಗಂಗಾಧರನ್ ನಾಯರ್ ಉದ್ಘಾಟಿಸಿದರು.
ಸಾಮಾಜಿಕ ಧುರೀಣ ಕೆ.ಕೆ.ವೇಣುಗೋಪಾಲ್ ಬಳಾಂತೋಡು ಮುಖ್ಯ ಅತಿಥಿಯಾಗಿದ್ದರು. ಸುಳ್ಯ ಕರಯೋಗಂ ಅಧ್ಯಕ್ಷ ಚಂದ್ರಶೇಖರ ಉಬರಡ್ಕ ಅಧ್ಯಕ್ಷತೆ ವಹಿಸಿದ್ದರು. ಗೌರವ ಡಾಕ್ಟರೇಟ್ ಪಡೆದ ಪಂಜ ಪಂಚಲಿಂಗೇಶ್ವರ ದೇಗುಲದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರ್ ಆವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕೆಎನ್ಎಸ್ಎಸ್ ಸುಳ್ಯ ಕರಯೋಗಂ ಮಾಹಿತಿ ಡೈರಿಯನ್ನು ಬಿಡುಗಡೆಗೊಳಿಸಲಾಯಿತು.
ರಿಯಾಲಿಟಿ ಶೋ ಪ್ರತಿಭೆ ವೈಷ್ಣವಿ, ಸ್ಕೌಟ್ ಪುರಸ್ಕಾರ ಪಡೆದ ಶ್ರೀಲಾಲ್, ಸಂಗೀತದಲ್ಲಿ ಡಿಸ್ಟಿಂಕ್ಷನ್ ಪಡೆದ ಶ್ರೀಲಯ, ಇಂಟಿಗ್ರೇಟೆಡ್ ಪಿಎಚ್ಡಿಗೆ ಆಯ್ಕೆಗೊಂಡ ಅಭಿಜ್ಞಾ ಕುತ್ತಮೊಟ್ಟೆಯವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಮಂಗಳೂರು ಕರಯೋಗಂನ ರಾಜನ್ ನಂಬಿಯಾರ್ ಶುಭ ಹಾರೈಸಿದರು. ಸುಳ್ಯ ಕರಯೋಗಂ ಉಪಾಧ್ಯಕ್ಷ ಚಂದ್ರಶೇಖರ್ ನಾಯರ್ ಸುಬ್ರಹ್ಮಣ್ಯ, ಕೋಶಾಧಿಕಾರಿ ವಿಶ್ವನಾಥನ್ ನಾಯರ್, ಮಹಿಳಾ ವಿಭಾಗದ ಅಧ್ಯಕ್ಷೆ ವೀಣಾ ಪ್ರಭಾಕರನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆಶಿಕಾ ಚಂದ್ರಶೇಖರ್ ಪ್ರಾರ್ಥಿಸಿದರು. ಪೂರ್ವಾಧ್ಯಕ್ಷರಾದ ಪ್ರಭಾಕರನ್ ನಾಯರ್ ಸ್ವಾಗತಿಸಿ, ಬಾಲಕೃಷ್ಣನ್ ನಾಯರ್ ಪ್ರಸ್ತಾವನೆಗೈದರು. ದುರ್ಗಾಕುಮಾರ್ ನಾಯರ್ ಕೆರೆ ಅಭಿನಂದನಾ ಭಾಷಣಗೈದರು. ಕಾರ್ಯದರ್ಶಿ ಪ್ರಿಯರಂಜನ್ ನಾಯರ್ ವಂದಿಸಿದರು. ಅಂಬಿಕಾ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು. ಓಣಂ ಕಾರ್ಯಕ್ರಮದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…