ಸುಳ್ಯ: ಪ್ರತಿ ಗ್ರಾಮಮಟ್ಟದಲ್ಲೂ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳನ್ನು ತೆರೆಯಲು ಕ್ರಮ ವಹಿಸಬೇಕೆಂದು ಸುಳ್ಯ ಶಾಸಕ ಎಸ್.ಅಂಗಾರ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿದ್ದಾರೆ.
ಶಿಕ್ಷಣ ಸಚಿವ ಸುರೇಶ್ಕುಮಾರ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿ, ಮನವಿ ಮಾಡಿದರು. ಇಂಗ್ಲಿಷ್ ಶಿಕ್ಷಣದ ವ್ಯಾಮೋಹದಿಂದ ಶ್ರೀಮಂತರ ಮಕ್ಕಳು ಖಾಸಗೀ ಸಂಸ್ಥೆಗಳ ಮೂಲಕ ಶಿಕ್ಷಣ ಪಡೆಯುತ್ತಾರೆ. ಆದರೆ ಬಡವರ ಮಕ್ಕಳು ಮಾತ್ರ ಸರಕಾರಿ ಕನ್ನಡ ಶಾಲೆಗಳಲ್ಲಿ ಕಲಿಯುತ್ತಿದ್ದಾರೆ. ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಕೊರತೆ ಇದ್ದು, ಕರ್ನಾಟಕ ಪಬ್ಲಿಕ್ ಸ್ಕೂಲ್ಗಳನ್ನು ಗ್ರಾಮ ಮಟ್ಟದಲ್ಲಿ ತೆರೆದಾಗ, ಬಡಮಕ್ಕಳಿಗೂ ಇಂಗ್ಲಿಷ್ ಶಿಕ್ಷಣ ಕೈಗೆಟಕುವಂತಾಗುತ್ತದೆ ಎಂದು ಅವರು ಮನವಿ ಮಾಡಿದರು.
ಸಚಿವರು ಮನವಿಗೆ ಸ್ಪಂದಿಸಿ, ಈ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಇದೇ ವೇಳೆ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋದಕೇತರ ಹುದ್ದೆಗಳನ್ನು ತುಂಬಲು ಕ್ರಮವಹಿಸಬೇಕೆಂದು ಸಚಿವರಲ್ಲಿ ವಿನಂತಿಸಿದರು. ಸುಳ್ಯ ತಾಲೂಕು ಪಂಚಾಯಿತಿ ಸದಸ್ಯ ರಾಧಾಕೃಷ್ಣ ಬೊಳ್ಳೂರು, ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ ಇದ್ದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…