ಪುತ್ತೂರು: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ರೈತ ಮುಖಂಡರ ಸಭೆ ಪುತ್ತೂರು ನೀರೀಕ್ಷಣ ಮಂದಿರದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಪೆರ್ನಾಂಡಿಸ್ ವಹಿಸಿದ್ದರು. ಹಿಂದಿನ ವರದಿಯನ್ನು ಉಪಾಧ್ಯಕ್ಷ ಶ್ರೀನಿವಾಸ್ ನಿಡಿಂಜಿ ಮಂಡಿಸಿದರು. ಲೆಕ್ಕ ಪತ್ರವನ್ನು ಉಪಾಧ್ಯಕ್ಷ ಅಲ್ವೀನ್ ಮಿನೆಜಸ್ ಮಂಡಿಸಿದರು. ಕೃಷಿ ಕ್ಷೇತ್ರದಲ್ಲಿ ನ ಪ್ರಸ್ತುತ ಸವಾಲುಗಳು ಹಾಗೂ ಮುಂದಿನ ಹೋರಾಟ ಕುರಿತು ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ವಿಚಾರ ಮಂಡಿಸಿದರು. ಜಿಲ್ಲೆಯ ರೈತರ ಪ್ರಮುಖ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಡಿ.17 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಪ್ರತಿಭಟನಾ ಸಭೆ ನಡೆಸಲು ನಿರ್ಣಯಿಸಲಾಯಿತು.
ಜಿಲ್ಲಾ ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಪೆರಾಬೆ ನಿರ್ವಹಿಸಿದರು. ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ದಿವಾಕರ ಪೈ ಮಜಿಗುಂಡಿ ಬಂಟ್ವಾಳ ತಾಲೂಕು ಅಧ್ಯಕ್ಷ ಪ್ರೇಮನಾಥ ಶೆಟ್ಟಿ ಬಾಳ್ತಿಲ, ಗೌರವಾಧ್ಯಕ್ಷ ಮೋನಪ್ಪ ಗೌಡ ಪೆರ್ನೆ, ಕೋಶಟಧಿಕಾರಿ ಶಾಹುಲ್ ಹಮೀದ್ ಕನ್ಯಾನ, ಸುಳ್ಯ ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು, ಪ್ರಧಾನ ಕಾರ್ಯದರ್ಶಿ ತೀರ್ಥರಾಮ ಗೌಡ ನೆಡ್ಚಿಲು, ಸಂಚಾಲಕರಾದ ಸೆಬಾಸ್ಟಿಯನ್, ಬೆಳ್ತಂಗಡಿ ತಾಲೂಕು ಉಪಾಧ್ಯಕ್ಷ ರಮೇಶ್ ಗೌಡ ನೆರಿಯ, ಚೆಂಬು ವಲಯ ಘಟಕದ ಪ್ರ.ಕಾರ್ಯದರ್ಶಿ ವಿಜಯಕುಮಾರ್ ನಾಯ್ಕ್, ಐವರ್ನಾಡು ಗ್ರಾಮ ಘಟಕದ ಅಧ್ಯಕ್ಷರಾದ ನೂಜಾಲು ಪದ್ಮನಾಭ ಗೌಡ, ಮುಖಂಡರಾದ ರವಿ ಶೆಟ್ಟಿ ಪೆರ್ನೆ, ನಾಗೇಶ್ ಕಡೇಶ್ವಾಲ್ಯ ಹಾಗೂ ಇತರ ರೈತ ಮುಖಂಡರು ಭಾಗವಹಿಸಿದ್ದರು.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…