Advertisement
ಸುದ್ದಿಗಳು

ಕರ್ನಾಟಕ ರಾಜ್ಯ ರೈತ ಸಂಘ ಮಾಸಿಕ ಸಭೆ

Share

ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಸುಳ್ಯ ಘಟಕದ ಮಾಸಿಕ ಸಭೆಯು ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನ.20 ರಂದು ನಡೆಯಿತು.

Advertisement
Advertisement
Advertisement
Advertisement

ಸಾಲ ಮನ್ನಾ ವಿಚಾರದಲ್ಲಿ ರೈತ ಮುಖಂಡರ ಸಮ್ಮುಖದಲ್ಲಿ ನೇರವಾಗಿ ಸಹಕಾರಿ ಇಲಾಖೆ ಮುಖ್ಯ ನಿಬಂಧಕರ ಜೊತೆ ಫೋನ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲಾಯಿತು. ಈ ತಿಂಗಳ ಕೊನೆಯ ಒಳಗಾಗಿ ಸಾಲ ಮನ್ನಾ ದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಕೊಡುತ್ತೇವೆ ಎಂದು ಅವರು ಭರವಸೆ ನೀಡಿದರು. ಈ ತಿಂಗಳ ಒಳಗಾಗಿ ಸಮಸ್ಯೆ ಬಗೆಹರಿಯದಿದ್ದರೆ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸುವುದೆಂದು ತೀರ್ಮಾನಿಸಲಾಯಿತು .

Advertisement

ಅಲೆಟ್ಟಿ, ಅಜ್ಜಾವರ, ಜಾಲ್ಸೂರು, ಉಬರಡ್ಕ, ಅರಂತೋಡು, ತೊಡಿಕಾನ, ಐವರ್ನಾಡು, ಚೊಕ್ಕಾಡಿ, ಮಡಪ್ಪಾಡಿ ಮುಂತಾದ ಹಲವಾರು ಗ್ರಾಮದ ರೈತ ಮುಖಂಡರು ಭಾಗವಹಿಸಿದ್ದರು.  ಗ್ರಾಮ ಸಮಿತಿಗಳನ್ನು ಸದ್ಯದಲ್ಲಿ ರಚಿಸಲು ನಿರ್ಧರಿಸಲಾಯಿತು. ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ಮಾತನಾಡಿ ದೇಶಾದ್ಯಂತ ಆರ್ ಸಿಇಪಿ ಒಪ್ಪಂದದ ವಿರುದ್ದ ನಡೆದ ರೈತರ ಹೋರಾಟ ಯಶಸ್ವಿಯಾಗಿದೆ. ಈ ರೀತಿ ರೈತರು ಸಂಘಟಿತರಾಗಿ ಹೋರಾಟ ನಡೆಸಲೇ ಬೇಕಾದ ಅನಿವಾವಾರ್ಯತೆ ಈಗ ಇದೆ ಎಂದರು. ನೂತನ ದ .ಕ ಜಿಲ್ಲಾ ಅಧ್ಯಕ್ಷ ಪ್ರಕಾಶ್ ಫೆರ್ನಾಂಡಿಸ್ ಮಾತನಾಡಿ ನಮ್ಮದು ನಂಜುಂಡಸ್ವಾಮಿ ಸ್ಥಾಪಿತ ರೈತ ಸಂಘ ,ಇದು ಯಾವುದೇ ಆಮಿಷಗಳಿಗೆ ಬಲಿಯಾಗದೆ ರೈತರ ಒಳಿತಿಗಾಗಿ ಹೋರಾಡುತ್ತಿರುವ ಸಂಘಟನೆ. ಹಲವು ಜನ ರೈತರಿಗಾಗಿ ನಮ್ಮ ಸ್ವಂತ ಹಣ ಖರ್ಚು ಮಾಡಿ ಹೋರಾಡುತ್ತಿರುವ ಸಂಘಟನೆ. ಆದ್ದರಿಂದ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡೋಣ ಎಂದು ಸ್ಪೂರ್ತಿ ತುಂಬಿದರು .

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಪೆರಾಬೆ ಮಾತನಾಡಿ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ನಾವು 24 × 7 ಗಂಟೆ ತಯಾರಿದ್ದೇವೆ ಎಂದು ಭರವಸೆ ನೀಡಿದರು . ಜಿಲ್ಲಾ ಉಪಾಧ್ಯಕ್ಷ ದಿವಾಕರ ಪೈ ಮಜಿಗುಂಡಿ, ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು, ಉಪಾಧ್ಯಕ್ಷ ಮುರಳಿಧರ್ ಅಡ್ಕಾರ್, ತಾಲೂಕು ಸಂಚಾಲಕ ಸಬಾಸ್ಟಿಯನ್, ತಾಲೂಕು ಖಜಾಂಜಿ ದೇವಪ್ಪ ಕುಂದಲ್ಪಾಡಿ ಉಪಸ್ಥಿತರಿದ್ದರು .

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

22 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago