Advertisement
ಸುದ್ದಿಗಳು

ಕರ್ನಾಟಕ ರಾಜ್ಯ ರೈತ ಸಂಘ ಮಾಸಿಕ ಸಭೆ

Share

ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಸುಳ್ಯ ಘಟಕದ ಮಾಸಿಕ ಸಭೆಯು ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನ.20 ರಂದು ನಡೆಯಿತು.

ಸಾಲ ಮನ್ನಾ ವಿಚಾರದಲ್ಲಿ ರೈತ ಮುಖಂಡರ ಸಮ್ಮುಖದಲ್ಲಿ ನೇರವಾಗಿ ಸಹಕಾರಿ ಇಲಾಖೆ ಮುಖ್ಯ ನಿಬಂಧಕರ ಜೊತೆ ಫೋನ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲಾಯಿತು. ಈ ತಿಂಗಳ ಕೊನೆಯ ಒಳಗಾಗಿ ಸಾಲ ಮನ್ನಾ ದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಕೊಡುತ್ತೇವೆ ಎಂದು ಅವರು ಭರವಸೆ ನೀಡಿದರು. ಈ ತಿಂಗಳ ಒಳಗಾಗಿ ಸಮಸ್ಯೆ ಬಗೆಹರಿಯದಿದ್ದರೆ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸುವುದೆಂದು ತೀರ್ಮಾನಿಸಲಾಯಿತು .

ಅಲೆಟ್ಟಿ, ಅಜ್ಜಾವರ, ಜಾಲ್ಸೂರು, ಉಬರಡ್ಕ, ಅರಂತೋಡು, ತೊಡಿಕಾನ, ಐವರ್ನಾಡು, ಚೊಕ್ಕಾಡಿ, ಮಡಪ್ಪಾಡಿ ಮುಂತಾದ ಹಲವಾರು ಗ್ರಾಮದ ರೈತ ಮುಖಂಡರು ಭಾಗವಹಿಸಿದ್ದರು.  ಗ್ರಾಮ ಸಮಿತಿಗಳನ್ನು ಸದ್ಯದಲ್ಲಿ ರಚಿಸಲು ನಿರ್ಧರಿಸಲಾಯಿತು. ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ಮಾತನಾಡಿ ದೇಶಾದ್ಯಂತ ಆರ್ ಸಿಇಪಿ ಒಪ್ಪಂದದ ವಿರುದ್ದ ನಡೆದ ರೈತರ ಹೋರಾಟ ಯಶಸ್ವಿಯಾಗಿದೆ. ಈ ರೀತಿ ರೈತರು ಸಂಘಟಿತರಾಗಿ ಹೋರಾಟ ನಡೆಸಲೇ ಬೇಕಾದ ಅನಿವಾವಾರ್ಯತೆ ಈಗ ಇದೆ ಎಂದರು. ನೂತನ ದ .ಕ ಜಿಲ್ಲಾ ಅಧ್ಯಕ್ಷ ಪ್ರಕಾಶ್ ಫೆರ್ನಾಂಡಿಸ್ ಮಾತನಾಡಿ ನಮ್ಮದು ನಂಜುಂಡಸ್ವಾಮಿ ಸ್ಥಾಪಿತ ರೈತ ಸಂಘ ,ಇದು ಯಾವುದೇ ಆಮಿಷಗಳಿಗೆ ಬಲಿಯಾಗದೆ ರೈತರ ಒಳಿತಿಗಾಗಿ ಹೋರಾಡುತ್ತಿರುವ ಸಂಘಟನೆ. ಹಲವು ಜನ ರೈತರಿಗಾಗಿ ನಮ್ಮ ಸ್ವಂತ ಹಣ ಖರ್ಚು ಮಾಡಿ ಹೋರಾಡುತ್ತಿರುವ ಸಂಘಟನೆ. ಆದ್ದರಿಂದ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡೋಣ ಎಂದು ಸ್ಪೂರ್ತಿ ತುಂಬಿದರು .

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಪೆರಾಬೆ ಮಾತನಾಡಿ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ನಾವು 24 × 7 ಗಂಟೆ ತಯಾರಿದ್ದೇವೆ ಎಂದು ಭರವಸೆ ನೀಡಿದರು . ಜಿಲ್ಲಾ ಉಪಾಧ್ಯಕ್ಷ ದಿವಾಕರ ಪೈ ಮಜಿಗುಂಡಿ, ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು, ಉಪಾಧ್ಯಕ್ಷ ಮುರಳಿಧರ್ ಅಡ್ಕಾರ್, ತಾಲೂಕು ಸಂಚಾಲಕ ಸಬಾಸ್ಟಿಯನ್, ತಾಲೂಕು ಖಜಾಂಜಿ ದೇವಪ್ಪ ಕುಂದಲ್ಪಾಡಿ ಉಪಸ್ಥಿತರಿದ್ದರು .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

4 days ago