ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಸುಳ್ಯ ಘಟಕದ ಮಾಸಿಕ ಸಭೆಯು ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನ.20 ರಂದು ನಡೆಯಿತು.
ಸಾಲ ಮನ್ನಾ ವಿಚಾರದಲ್ಲಿ ರೈತ ಮುಖಂಡರ ಸಮ್ಮುಖದಲ್ಲಿ ನೇರವಾಗಿ ಸಹಕಾರಿ ಇಲಾಖೆ ಮುಖ್ಯ ನಿಬಂಧಕರ ಜೊತೆ ಫೋನ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲಾಯಿತು. ಈ ತಿಂಗಳ ಕೊನೆಯ ಒಳಗಾಗಿ ಸಾಲ ಮನ್ನಾ ದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಕೊಡುತ್ತೇವೆ ಎಂದು ಅವರು ಭರವಸೆ ನೀಡಿದರು. ಈ ತಿಂಗಳ ಒಳಗಾಗಿ ಸಮಸ್ಯೆ ಬಗೆಹರಿಯದಿದ್ದರೆ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸುವುದೆಂದು ತೀರ್ಮಾನಿಸಲಾಯಿತು .
ಅಲೆಟ್ಟಿ, ಅಜ್ಜಾವರ, ಜಾಲ್ಸೂರು, ಉಬರಡ್ಕ, ಅರಂತೋಡು, ತೊಡಿಕಾನ, ಐವರ್ನಾಡು, ಚೊಕ್ಕಾಡಿ, ಮಡಪ್ಪಾಡಿ ಮುಂತಾದ ಹಲವಾರು ಗ್ರಾಮದ ರೈತ ಮುಖಂಡರು ಭಾಗವಹಿಸಿದ್ದರು. ಗ್ರಾಮ ಸಮಿತಿಗಳನ್ನು ಸದ್ಯದಲ್ಲಿ ರಚಿಸಲು ನಿರ್ಧರಿಸಲಾಯಿತು. ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ಮಾತನಾಡಿ ದೇಶಾದ್ಯಂತ ಆರ್ ಸಿಇಪಿ ಒಪ್ಪಂದದ ವಿರುದ್ದ ನಡೆದ ರೈತರ ಹೋರಾಟ ಯಶಸ್ವಿಯಾಗಿದೆ. ಈ ರೀತಿ ರೈತರು ಸಂಘಟಿತರಾಗಿ ಹೋರಾಟ ನಡೆಸಲೇ ಬೇಕಾದ ಅನಿವಾವಾರ್ಯತೆ ಈಗ ಇದೆ ಎಂದರು. ನೂತನ ದ .ಕ ಜಿಲ್ಲಾ ಅಧ್ಯಕ್ಷ ಪ್ರಕಾಶ್ ಫೆರ್ನಾಂಡಿಸ್ ಮಾತನಾಡಿ ನಮ್ಮದು ನಂಜುಂಡಸ್ವಾಮಿ ಸ್ಥಾಪಿತ ರೈತ ಸಂಘ ,ಇದು ಯಾವುದೇ ಆಮಿಷಗಳಿಗೆ ಬಲಿಯಾಗದೆ ರೈತರ ಒಳಿತಿಗಾಗಿ ಹೋರಾಡುತ್ತಿರುವ ಸಂಘಟನೆ. ಹಲವು ಜನ ರೈತರಿಗಾಗಿ ನಮ್ಮ ಸ್ವಂತ ಹಣ ಖರ್ಚು ಮಾಡಿ ಹೋರಾಡುತ್ತಿರುವ ಸಂಘಟನೆ. ಆದ್ದರಿಂದ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡೋಣ ಎಂದು ಸ್ಪೂರ್ತಿ ತುಂಬಿದರು .
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಪೆರಾಬೆ ಮಾತನಾಡಿ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ನಾವು 24 × 7 ಗಂಟೆ ತಯಾರಿದ್ದೇವೆ ಎಂದು ಭರವಸೆ ನೀಡಿದರು . ಜಿಲ್ಲಾ ಉಪಾಧ್ಯಕ್ಷ ದಿವಾಕರ ಪೈ ಮಜಿಗುಂಡಿ, ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು, ಉಪಾಧ್ಯಕ್ಷ ಮುರಳಿಧರ್ ಅಡ್ಕಾರ್, ತಾಲೂಕು ಸಂಚಾಲಕ ಸಬಾಸ್ಟಿಯನ್, ತಾಲೂಕು ಖಜಾಂಜಿ ದೇವಪ್ಪ ಕುಂದಲ್ಪಾಡಿ ಉಪಸ್ಥಿತರಿದ್ದರು .
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…