ಸುಳ್ಯ: ಕರ್ನಾಟಕ ಸೆಕ್ಷನ್ ಮ್ಯಾನೇಜಿಂಗ್ ಕಮಿಟಿಯ ಸದಸ್ಯತನಕ್ಕೆ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಷನ್ ನವದೆಹಲಿ ನಡೆಸಿದ ಚುನಾವಣೆಯಲ್ಲಿ ಸುಳ್ಯದ ಶಶಾಂಕ್ ಎಂ.ಗೌಡ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿದ್ದಾರೆ.
ಇವರು ಮೂಡಬಿದಿರೆಯ ಯೆನೆಪೊಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಷನ್ ನಡೆಸಿದ ಚುನಾವಣೆಗೆ ಕರ್ನಾಟಕದಿಂದ ಒಟ್ಟು ಹದಿನೆಂಟು ಸಾವಿರ ಮತಗಳಿದ್ದವು. ಕರ್ನಾಟಕ
ದಿಂದ ಹನ್ನೆರಡು ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಚುನಾವಣೆಗೆ ಇದರಲ್ಲಿ ಐದು ಮಂದಿಯಷ್ಟೇ ಆಯ್ಕೆಯಾಗಿದ್ದಾರೆ. ಈ ಸದಸ್ಯತ್ವವು 2020ರಿಂದ 2024ರವರೆಗೆ 5 ವರ್ಷಗಳ ಅವಧಿಯದ್ದಾಗಿರುತ್ತದೆ.
ಇವರು ಸುಳ್ಯ ಕೆ.ವಿ.ಜಿ. ಪಾಲಿಟೆಕ್ನಿಕ್ನಲ್ಲಿ ಆಯ್ಕೆ ಶ್ರೇಣಿ ಉಪನ್ಯಾಸಕರಾಗಿರುವ ಮಧುಕುಮಾರ್ ಬಿ. ಆರ್ ಮತ್ತು ಬಿ.ಟಿ.ಜಯಲಕ್ಷ್ಮಿಯವರ ಪುತ್ರ. ಇವರ ಪತ್ನಿ ಭಾರ್ಗವಿ ಕೆ.ಅರ್. ಮೂಡುಬಿದಿರೆ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಗೆಲುವಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ವಿವಾಹದ ವಿಳಂಬ, ಸಂತಾನದ ಕೊರತೆ, ಮತ್ತು ಆರ್ಥಿಕ ಅಡೆತಡೆಗಳಿಗೆ ಕಾರಣವಾಗಬಹುದು. ಸರ್ಪಸಂಸ್ಕಾರವು ಈ…
ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…
ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…
ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…
ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…