ಸುಳ್ಯ: ಕರ್ನಾಟಕ ಸೆಕ್ಷನ್ ಮ್ಯಾನೇಜಿಂಗ್ ಕಮಿಟಿಯ ಸದಸ್ಯತನಕ್ಕೆ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಷನ್ ನವದೆಹಲಿ ನಡೆಸಿದ ಚುನಾವಣೆಯಲ್ಲಿ ಸುಳ್ಯದ ಶಶಾಂಕ್ ಎಂ.ಗೌಡ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿದ್ದಾರೆ.
ಇವರು ಮೂಡಬಿದಿರೆಯ ಯೆನೆಪೊಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಷನ್ ನಡೆಸಿದ ಚುನಾವಣೆಗೆ ಕರ್ನಾಟಕದಿಂದ ಒಟ್ಟು ಹದಿನೆಂಟು ಸಾವಿರ ಮತಗಳಿದ್ದವು. ಕರ್ನಾಟಕ
ದಿಂದ ಹನ್ನೆರಡು ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಚುನಾವಣೆಗೆ ಇದರಲ್ಲಿ ಐದು ಮಂದಿಯಷ್ಟೇ ಆಯ್ಕೆಯಾಗಿದ್ದಾರೆ. ಈ ಸದಸ್ಯತ್ವವು 2020ರಿಂದ 2024ರವರೆಗೆ 5 ವರ್ಷಗಳ ಅವಧಿಯದ್ದಾಗಿರುತ್ತದೆ.
ಇವರು ಸುಳ್ಯ ಕೆ.ವಿ.ಜಿ. ಪಾಲಿಟೆಕ್ನಿಕ್ನಲ್ಲಿ ಆಯ್ಕೆ ಶ್ರೇಣಿ ಉಪನ್ಯಾಸಕರಾಗಿರುವ ಮಧುಕುಮಾರ್ ಬಿ. ಆರ್ ಮತ್ತು ಬಿ.ಟಿ.ಜಯಲಕ್ಷ್ಮಿಯವರ ಪುತ್ರ. ಇವರ ಪತ್ನಿ ಭಾರ್ಗವಿ ಕೆ.ಅರ್. ಮೂಡುಬಿದಿರೆ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಗೆಲುವಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…