ಸುಳ್ಯ: ವಿದ್ಯಾರ್ಥಿಗಳು ಭವಿಷ್ಯದಲ್ಲಿ ದೇಶವನ್ನು ಮುನ್ನೆಡೆಸುವ ಪ್ರಜೆಗಳಾಗಿದ್ದು ವಿದ್ಯಾರ್ಥಿಗಳು ಜೀವನದಲ್ಲಿ ವಿದ್ಯಾರ್ಜನೆಯೊಂದಿಗೆ ಶಿಸ್ತು ಪ್ರಾಮಾಣಿಕತೆಯನ್ನು ಅಳವಡಿಸಿಕೊಳ್ಳಿ ಎಂದು ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ತೇಜೇಶ್ವರ್ ಕುಂದಲ್ಪಾಡಿ ಹೇಳಿದರು.
ಅವರು ಸುಳ್ಯ ಗಾಂದಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಯಾವುದೇ ಒಂದು ರಾಜಕೀಯ ಪಕ್ಷದ ಪ್ರೇರಿತವಾಗಿರುವುದು ಕಲಿಕೆಯ ಮೇಲೂ ಪರಿಣಾಮ ಬೀರುತ್ತದೆ.ಈ ನಿಟ್ಟಿಲ್ಲಿ ವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದಲ್ಲಿ ರಾಜಕೀಯಕ್ಕೆ ಇಳಿಯಬಾರದು.ಸರಕಾರಿ ಶಾಲೆಗಳು ಉಳಿಯಬೇಕಾದರೆ ಶಾಲೆಗೆ ಉತ್ತಮ ಫಲಿತಾಂಶ ಬರಬೇಕು.ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು,ಶಿಕ್ಷಕರು ಪ್ರಯತ್ನ ಮಾಡಬೇಕಾಗಿದೆ ಎಂದು ಹೇಳಿದರು.
ಶಾಲಾ ಮುಖ್ಯ ಶಿಕ್ಷಕಿ ನಳೀನಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಾಲೇಜು ವಿಭಾಗದ ಆಂಗ್ಲಭಾಷಾ ಶಿಕ್ಷಕ ಅಬ್ದುಲ್ಸಮದ್ , ಹೈಸ್ಕೂಲ್ ವಿಭಾಗದ ಕನ್ನಡ ಶಿಕ್ಷಕ ಅರುಣಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.ವಿದ್ಯಾರ್ಥಿ ನಾಯಕ ಮಹಮ್ಮದ್ ಶಕೀರ್ ಹಾಗೂ ಶಾಲಾ ಮಂತ್ರಿಗಳು,ವಿವಿಧ ಸಂಘದ ಅಧ್ಯಕ್ಷರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಕ ಚಿನ್ನಪ್ಪ ಗೌಡ ಪ್ರಾಸ್ತವಿಕವಾಗಿ ಮಾತನಾಡಿದರು.ವಿದ್ಯಾರ್ಥಿನಿ ದಿವ್ಯ ಸ್ವಾಗತಿಸಿ,ಭವ್ಯ ವಂದಿಸಿದರು.ಮುಬಿನ ಕಾರ್ಯಕ್ರಮ ನಿರೂಪಿಸಿದರು.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…