ಪುತ್ತೂರು : ಕಲಿಕೆ ಎಂಬುವುದು ಒತ್ತಾಯದಿಂದ ಹೇರುವ ಪ್ರಕ್ರಿಯೆ ಅಲ್ಲ. ಅದು ಮಕ್ಕಳಲ್ಲಿ ಸಹಜವಾಗಿ ಮೂಡಿಬರಬೇಕಾದ ಪ್ರಕ್ರಿಯೆ. ಮಕ್ಕಳು ಸ್ವತಂತ್ರವಾಗಿ ಕಲಿತಾಗ ಮಾತ್ರ ಕಲಿಕೆ ಹೆಚ್ಚಿನ ಮೂರ್ತ ಸ್ವರೂಪ ಪಡೆದುಕೊಳ್ಳಲು ಸಾಧ್ಯ ಎಂದು ಸಾಹಿತಿ, ಸಂಜಯ ನಗರ ಶಾಲೆಯ ಮುಖ್ಯ ಶಿಕ್ಷಕ ರಮೇಶ್ ಉಳಯ ಅವರು ಹೇಳಿದರು.
ಪುತ್ತೂರು ತಾಲೂಕಿನ ಕೆಮ್ಮಿಂಜೆ ಸರಕಾರಿ ಶಾಲೆಯಲ್ಲಿ ಸೋಮವಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆರಂಭಗೊಂಡ ಬರ ಪೀಡಿತ ಪ್ರದೇಶಗಳಲ್ಲಿ ನಡೆಯುವ `ಸ್ವಲ್ಪ ಮೋಜು-ಸ್ವಲ್ಪ ಕಲಿಕೆ’ ಬೇಸಿಗೆ ಸಂಭ್ರಮ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಪುತ್ತೂರು ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಶಾಲಿನಿ ಶೆಟ್ಟಿ ಅವರು ಉದ್ಘಾಟಿಸಿದರು.
ಕೆಮ್ಮಿಂಜೆ ಶಾಲಾ ಎಸ್ಡಿಎಂಸಿ ಸದಸ್ಯ ಗಣೇಶ್, ಶಾಲಾ ಮುಖ್ಯ ಶಿಕ್ಷಕಿ ಶಶಿಕಲಾ ಅವರು ಮಾತನಾಡಿದರು. ಸಾಮೆತ್ತಡ್ಕ ಶಾಲಾ ಶಿಕ್ಷಕಿ ಪ್ರಶಾಂತಿ, ನೆಲ್ಲಿಕಟ್ಟೆ ಶಾಲಾ ಸಂಗೀತ ಶಿಕ್ಷಕ ಭಗವಂತ ಮತ್ತಿತರರು ಉಪಸ್ಥಿತರಿದ್ದರು. ಬೇಸಿಗೆ ಶಿಬಿರದ ನೋಡೆಲ್ ಶಿಕ್ಷಕಿ ಅರ್ಚನಾ ವಂದಿಸಿದರು. ಶಿಬಿರದ ನೋಡೆಲ್ ಶಿಕ್ಷಕಿ ಸುಮತಿ ನಿರೂಪಿಸಿದರು.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…