ಪುತ್ತೂರು : ಕಲಿಕೆ ಎಂಬುವುದು ಒತ್ತಾಯದಿಂದ ಹೇರುವ ಪ್ರಕ್ರಿಯೆ ಅಲ್ಲ. ಅದು ಮಕ್ಕಳಲ್ಲಿ ಸಹಜವಾಗಿ ಮೂಡಿಬರಬೇಕಾದ ಪ್ರಕ್ರಿಯೆ. ಮಕ್ಕಳು ಸ್ವತಂತ್ರವಾಗಿ ಕಲಿತಾಗ ಮಾತ್ರ ಕಲಿಕೆ ಹೆಚ್ಚಿನ ಮೂರ್ತ ಸ್ವರೂಪ ಪಡೆದುಕೊಳ್ಳಲು ಸಾಧ್ಯ ಎಂದು ಸಾಹಿತಿ, ಸಂಜಯ ನಗರ ಶಾಲೆಯ ಮುಖ್ಯ ಶಿಕ್ಷಕ ರಮೇಶ್ ಉಳಯ ಅವರು ಹೇಳಿದರು.
ಪುತ್ತೂರು ತಾಲೂಕಿನ ಕೆಮ್ಮಿಂಜೆ ಸರಕಾರಿ ಶಾಲೆಯಲ್ಲಿ ಸೋಮವಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆರಂಭಗೊಂಡ ಬರ ಪೀಡಿತ ಪ್ರದೇಶಗಳಲ್ಲಿ ನಡೆಯುವ `ಸ್ವಲ್ಪ ಮೋಜು-ಸ್ವಲ್ಪ ಕಲಿಕೆ’ ಬೇಸಿಗೆ ಸಂಭ್ರಮ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಪುತ್ತೂರು ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಶಾಲಿನಿ ಶೆಟ್ಟಿ ಅವರು ಉದ್ಘಾಟಿಸಿದರು.
ಕೆಮ್ಮಿಂಜೆ ಶಾಲಾ ಎಸ್ಡಿಎಂಸಿ ಸದಸ್ಯ ಗಣೇಶ್, ಶಾಲಾ ಮುಖ್ಯ ಶಿಕ್ಷಕಿ ಶಶಿಕಲಾ ಅವರು ಮಾತನಾಡಿದರು. ಸಾಮೆತ್ತಡ್ಕ ಶಾಲಾ ಶಿಕ್ಷಕಿ ಪ್ರಶಾಂತಿ, ನೆಲ್ಲಿಕಟ್ಟೆ ಶಾಲಾ ಸಂಗೀತ ಶಿಕ್ಷಕ ಭಗವಂತ ಮತ್ತಿತರರು ಉಪಸ್ಥಿತರಿದ್ದರು. ಬೇಸಿಗೆ ಶಿಬಿರದ ನೋಡೆಲ್ ಶಿಕ್ಷಕಿ ಅರ್ಚನಾ ವಂದಿಸಿದರು. ಶಿಬಿರದ ನೋಡೆಲ್ ಶಿಕ್ಷಕಿ ಸುಮತಿ ನಿರೂಪಿಸಿದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…