ಪುತ್ತೂರು : ಕಲಿಕೆ ಎಂಬುವುದು ಒತ್ತಾಯದಿಂದ ಹೇರುವ ಪ್ರಕ್ರಿಯೆ ಅಲ್ಲ. ಅದು ಮಕ್ಕಳಲ್ಲಿ ಸಹಜವಾಗಿ ಮೂಡಿಬರಬೇಕಾದ ಪ್ರಕ್ರಿಯೆ. ಮಕ್ಕಳು ಸ್ವತಂತ್ರವಾಗಿ ಕಲಿತಾಗ ಮಾತ್ರ ಕಲಿಕೆ ಹೆಚ್ಚಿನ ಮೂರ್ತ ಸ್ವರೂಪ ಪಡೆದುಕೊಳ್ಳಲು ಸಾಧ್ಯ ಎಂದು ಸಾಹಿತಿ, ಸಂಜಯ ನಗರ ಶಾಲೆಯ ಮುಖ್ಯ ಶಿಕ್ಷಕ ರಮೇಶ್ ಉಳಯ ಅವರು ಹೇಳಿದರು.
ಪುತ್ತೂರು ತಾಲೂಕಿನ ಕೆಮ್ಮಿಂಜೆ ಸರಕಾರಿ ಶಾಲೆಯಲ್ಲಿ ಸೋಮವಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆರಂಭಗೊಂಡ ಬರ ಪೀಡಿತ ಪ್ರದೇಶಗಳಲ್ಲಿ ನಡೆಯುವ `ಸ್ವಲ್ಪ ಮೋಜು-ಸ್ವಲ್ಪ ಕಲಿಕೆ’ ಬೇಸಿಗೆ ಸಂಭ್ರಮ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಪುತ್ತೂರು ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಶಾಲಿನಿ ಶೆಟ್ಟಿ ಅವರು ಉದ್ಘಾಟಿಸಿದರು.
ಕೆಮ್ಮಿಂಜೆ ಶಾಲಾ ಎಸ್ಡಿಎಂಸಿ ಸದಸ್ಯ ಗಣೇಶ್, ಶಾಲಾ ಮುಖ್ಯ ಶಿಕ್ಷಕಿ ಶಶಿಕಲಾ ಅವರು ಮಾತನಾಡಿದರು. ಸಾಮೆತ್ತಡ್ಕ ಶಾಲಾ ಶಿಕ್ಷಕಿ ಪ್ರಶಾಂತಿ, ನೆಲ್ಲಿಕಟ್ಟೆ ಶಾಲಾ ಸಂಗೀತ ಶಿಕ್ಷಕ ಭಗವಂತ ಮತ್ತಿತರರು ಉಪಸ್ಥಿತರಿದ್ದರು. ಬೇಸಿಗೆ ಶಿಬಿರದ ನೋಡೆಲ್ ಶಿಕ್ಷಕಿ ಅರ್ಚನಾ ವಂದಿಸಿದರು. ಶಿಬಿರದ ನೋಡೆಲ್ ಶಿಕ್ಷಕಿ ಸುಮತಿ ನಿರೂಪಿಸಿದರು.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…