ಪುತ್ತೂರು : ಕಲಿಕೆ ಎಂಬುವುದು ಒತ್ತಾಯದಿಂದ ಹೇರುವ ಪ್ರಕ್ರಿಯೆ ಅಲ್ಲ. ಅದು ಮಕ್ಕಳಲ್ಲಿ ಸಹಜವಾಗಿ ಮೂಡಿಬರಬೇಕಾದ ಪ್ರಕ್ರಿಯೆ. ಮಕ್ಕಳು ಸ್ವತಂತ್ರವಾಗಿ ಕಲಿತಾಗ ಮಾತ್ರ ಕಲಿಕೆ ಹೆಚ್ಚಿನ ಮೂರ್ತ ಸ್ವರೂಪ ಪಡೆದುಕೊಳ್ಳಲು ಸಾಧ್ಯ ಎಂದು ಸಾಹಿತಿ, ಸಂಜಯ ನಗರ ಶಾಲೆಯ ಮುಖ್ಯ ಶಿಕ್ಷಕ ರಮೇಶ್ ಉಳಯ ಅವರು ಹೇಳಿದರು.
ಪುತ್ತೂರು ತಾಲೂಕಿನ ಕೆಮ್ಮಿಂಜೆ ಸರಕಾರಿ ಶಾಲೆಯಲ್ಲಿ ಸೋಮವಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆರಂಭಗೊಂಡ ಬರ ಪೀಡಿತ ಪ್ರದೇಶಗಳಲ್ಲಿ ನಡೆಯುವ `ಸ್ವಲ್ಪ ಮೋಜು-ಸ್ವಲ್ಪ ಕಲಿಕೆ’ ಬೇಸಿಗೆ ಸಂಭ್ರಮ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಪುತ್ತೂರು ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಶಾಲಿನಿ ಶೆಟ್ಟಿ ಅವರು ಉದ್ಘಾಟಿಸಿದರು.
ಕೆಮ್ಮಿಂಜೆ ಶಾಲಾ ಎಸ್ಡಿಎಂಸಿ ಸದಸ್ಯ ಗಣೇಶ್, ಶಾಲಾ ಮುಖ್ಯ ಶಿಕ್ಷಕಿ ಶಶಿಕಲಾ ಅವರು ಮಾತನಾಡಿದರು. ಸಾಮೆತ್ತಡ್ಕ ಶಾಲಾ ಶಿಕ್ಷಕಿ ಪ್ರಶಾಂತಿ, ನೆಲ್ಲಿಕಟ್ಟೆ ಶಾಲಾ ಸಂಗೀತ ಶಿಕ್ಷಕ ಭಗವಂತ ಮತ್ತಿತರರು ಉಪಸ್ಥಿತರಿದ್ದರು. ಬೇಸಿಗೆ ಶಿಬಿರದ ನೋಡೆಲ್ ಶಿಕ್ಷಕಿ ಅರ್ಚನಾ ವಂದಿಸಿದರು. ಶಿಬಿರದ ನೋಡೆಲ್ ಶಿಕ್ಷಕಿ ಸುಮತಿ ನಿರೂಪಿಸಿದರು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…