ಸುಳ್ಯ: ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮ ಕಲ್ಮಕಾರಿನಲ್ಲಿ ತೆರೆಯಲಾದ ನೆರೆ ಪರಿಹಾರ ಕೇಂದ್ರಕ್ಕೆ ಶಾಸಕ ಎಸ್.ಅಂಗಾರ ಶನಿವಾರ ಭೇಟಿ ನೀಡಿದರು.
ಕೊಲ್ಲಮೊಗ್ರ ಗ್ರಾಮದ ಕಲ್ಮಕಾರಿನಲ್ಲಿ ಗುಡ್ಡ ಕುಸಿಯುವ ಮತ್ತು ಪ್ರಳಯದ ಭೀತಿಯಿಂದ ಮುಂಜಾಗೃತಾ ಕ್ರಮವಾಗಿ ಪ್ರದೇಶದ ಎಂಟು ಕುಟುಂಬಗಳ ಸುಮಾರು 25 ಮಂದಿಯನ್ನು ಕಲ್ಮಕಾರಿನ ರಂಗಮಂದಿರಕ್ಕೆ ಸ್ಥಳಾಂತರಿಸಲಾಗಿತ್ತು. ಕೇಂದ್ರದಲ್ಲಿ ಪರಿಶೀಲನೆ ನಡೆಸಿದ ಶಾಸಕರು ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ಎಲ್ಲಾ ಸಹಾಯವನ್ನು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸದಸ್ಯೆ ಆಶಾ ತಿಮ್ಮಪ್ಪ, ತಾಲೂಕು ಪಂಚಾಯತ್ ಸದಸ್ಯ ಉದಯ ಕೊಪ್ಪಡ್ಕ, ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಅಧ್ಯಕ್ಷೆ ವೀಣಾ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯ, ದೇವರಾಜ್ ಮುತ್ಲಾಜೆ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಶಾಸಕರು ಕುಸಿತ ಭೀತಿ ಇರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…