ಸುದ್ದಿಗಳು

ಕಲ್ಮಕಾರು ಗ್ರಾಮಕ್ಕೆ ತಹಶೀಲ್ದಾರ್ ತಂಡ ಭೇಟಿ

Share

ಸುಳ್ಯ: ಕಳೆದ ವರ್ಷ ಮಳೆಗಾಲದಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾಗಿದ್ದ ಕಲ್ಮಕಾರು ಪ್ರದೇಶಕ್ಕೆ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ವರ್ಷ ಗುಡ್ಡ ಬಿರುಕು ಬಿಟ್ಟ ಸ್ಥಳಕ್ಕೆ ಮತ್ತು ಗುಡ್ಡ ಕುಸಿಯುವ ಭೀತಿಯಲ್ಲಿದ್ದ ಪ್ರದೇಶದ ಮನೆಗಳಿಗೆ ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿ ಅವರಿಗೆ ಧೈರ್ಯ ತುಂಬಿದರು. ಮಳೆ ಜಾಸ್ತಿಯಾದರೆ ಅಲ್ಲಿ ವಾಸಿಸುವ ಕುಟುಂಬಗಳನ್ನು ಕಲ್ಮಕಾರಿನ ಶಾಲೆ ಮತ್ತು ಅಂಗನವಾಡಿ ಕಟ್ಟಡಕ್ಕೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು. ಗುಡ್ಡ ಕುಸಿಯುವ ಭೀತಿಯಿರುವ ಪ್ರದೇಶದ ಕುಟುಂಬಗಳಿಗೆ ಬೇರೆ ಕಡೆ ಸರಕಾರಿ ಜಮೀನು ಕಾಯ್ದಿರಿಸಿ ಪಂಚಾಯತ್ ವತಿಯಿಂದ ಮನೆ ನಿರ್ಮಿಸಲು ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಸೇತುವೆ ನಿರ್ಮಾಣವಾಗದ ಹಿನ್ನಲೆಯಲ್ಲಿ ಕಲ್ಮಕಾರಿನ ಜನ ಚುನಾವಣಾ ಬಹಿಷ್ಕಾರ ಘೋಷಿಸಿದ್ದಲ್ಲಿ ಸೇತುವೆ ಕಾಮಗಾರಿ ನಡೆಯುವ ಸ್ಥಳಕ್ಕೂ ಅವರು ಭೇಟಿ ನೀಡಿದರು. ಚುನಾವಣಾ ಸಂದರ್ಭದಲ್ಲಿ ತಹಶೀಲ್ದಾರ್ ಭೇಟಿ ನೀಡಿ ಸೇತುವೆ ನಿರ್ಮಾಣ ಮಾಡಿಸುವ ಭರವಸೆ ನೀಡಿದ ಹಿನ್ನಲೆಯಲ್ಲಿ ಮತದಾನ ಬಹಿಷ್ಕಾರ ಹಿಂಪಡೆದಿದ್ದರು. ಬಳಿಕ ಸೇತುವೆಯ ಕಾಮಗಾರಿ ಆರಂಭವಾಗಿತ್ತು. ಸೇತುವೆ ಕಾಮಗಾರಿಯನ್ನು ತಹಶೀಲ್ದಾರ್ ಪರಿಶೀಲಿಸಿದರು.

ಕಂದಾಯ ನಿರೀಕ್ಷಕ ಶಂಕರ್ ಎಂ.ಎಲ್, ಗ್ರಾಮ ಲೆಕ್ಕಾಧಿಕಾರಿ ಶರತ್ ಎಸ್.ಆರ್., ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ, ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಅಧ್ಯಕ್ಷೆ ವೀಣಾ ಮತ್ತಿತರರು ಉಪಸ್ಥಿತರಿದ್ದರು. ಪ್ರಕೃತಿ ವಿಕೋಪ ಉಂಟಾದಲ್ಲಿ ಗ್ರಾಮ ಮಟ್ಟದಲ್ಲಿ ರಕ್ಷಣಾ ತಂಡಗಳನ್ನು ರಚಿಸಲಾಗಿದೆ ಎಂದು ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ತಿಳಿಸಿದ್ದಾರೆ.

 

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೋಮಾಳ, ಕೆರೆ ಜಾಗ ಒತ್ತುವರಿ ಮಾಡಿಕೊಂಡರೆ ಕಠಿಣ ಕ್ರಮ

ಗೋಮಾಳ, ಕೆರೆ ಜಾಗ ಸೇರಿದಂತೆ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಮೀನನ್ನು ತೆರವುಗೊಳಿಸಲು ಕಠಿಣ…

5 hours ago

ವ್ಯೋಮಯಾನಿಗಳ ಪುನರ್ಜನ್ಮ….! ವಿಜ್ಞಾನದ ವಿಸ್ಮಯ…!

ಕ್ರಿಕೆಟ್ ಪಂದ್ಯವನ್ನು ಅಥವಾ ಗ್ರಹಣವನ್ನು ವೀಕ್ಷಿಸುವುದಕ್ಕಾಗಿ ಸಮಯವನ್ನಿಟ್ಟುಕೊಂಡು ಸಿದ್ಧರಾಗುವಂತೆ ನಾನು ಸಿದ್ಧನಾಗಿದ್ದೆ. ಇಲ್ಲಿ…

6 hours ago

ಹವಾಮಾನ ವರದಿ | 19-03-2025 | ಇಂದು ಕೆಲವು ಕಡೆ ಮಳೆ ಸಾಧ್ಯತೆ | ಮಾರ್ಚ್ 22 ರಿಂದ ಬೇಸಿಗೆ ಮಳೆಯ ಮುನ್ಸೂಚನೆ |

ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 22 ರಿಂದ ಬೇಸಿಗೆ ಮಳೆ ಆರಂಭವಾಗುವ…

14 hours ago

ಮಲೆನಾಡು-ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಸಮಸ್ಯೆ ಎಲ್ಲಾಗುತ್ತಿದೆ…? | ಇಳುವರಿ ಕೊರೆತೆಯಾಗುತ್ತಿರುವುದು ಏಕೆ..? | ಏನು ಮಾಡಬಹುದು ಮುಂದೆ..?

ಈಚೆಗೆ ಕರಾವಳಿ-ಮಲೆನಾಡು ಭಾಗದಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಅದರ ಜೊತೆಗೇ ತೇವಾಂಶ ಗಣನೀಯವಾಗಿ…

16 hours ago

ಹೊಸರುಚಿ | ಗುಜ್ಜೆ ಸಮೋಸ

ಗುಜ್ಜೆ ಸಮೋಸಕ್ಕೆ ಬೇಕಾಗುವ ಸಾಮಗ್ರಿಗಳು  ಹಾಗೂ ಮಾಡುವ ವಿಧಾನ : ಗೋಧಿ ಹುಡಿ…

19 hours ago

ಮಾರ್ಚ್ 19 ರಿಂದ 5 ರಾಶಿಗಳಿಗೆ ವಿಶೇಷ ಶುಭ ಸೂಚನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

20 hours ago