ಸುದ್ದಿಗಳು

ಕಲ್ಮಕಾರು ಗ್ರಾಮಕ್ಕೆ ತಹಶೀಲ್ದಾರ್ ತಂಡ ಭೇಟಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕಳೆದ ವರ್ಷ ಮಳೆಗಾಲದಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾಗಿದ್ದ ಕಲ್ಮಕಾರು ಪ್ರದೇಶಕ್ಕೆ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

ಕಳೆದ ವರ್ಷ ಗುಡ್ಡ ಬಿರುಕು ಬಿಟ್ಟ ಸ್ಥಳಕ್ಕೆ ಮತ್ತು ಗುಡ್ಡ ಕುಸಿಯುವ ಭೀತಿಯಲ್ಲಿದ್ದ ಪ್ರದೇಶದ ಮನೆಗಳಿಗೆ ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿ ಅವರಿಗೆ ಧೈರ್ಯ ತುಂಬಿದರು. ಮಳೆ ಜಾಸ್ತಿಯಾದರೆ ಅಲ್ಲಿ ವಾಸಿಸುವ ಕುಟುಂಬಗಳನ್ನು ಕಲ್ಮಕಾರಿನ ಶಾಲೆ ಮತ್ತು ಅಂಗನವಾಡಿ ಕಟ್ಟಡಕ್ಕೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು. ಗುಡ್ಡ ಕುಸಿಯುವ ಭೀತಿಯಿರುವ ಪ್ರದೇಶದ ಕುಟುಂಬಗಳಿಗೆ ಬೇರೆ ಕಡೆ ಸರಕಾರಿ ಜಮೀನು ಕಾಯ್ದಿರಿಸಿ ಪಂಚಾಯತ್ ವತಿಯಿಂದ ಮನೆ ನಿರ್ಮಿಸಲು ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಸೇತುವೆ ನಿರ್ಮಾಣವಾಗದ ಹಿನ್ನಲೆಯಲ್ಲಿ ಕಲ್ಮಕಾರಿನ ಜನ ಚುನಾವಣಾ ಬಹಿಷ್ಕಾರ ಘೋಷಿಸಿದ್ದಲ್ಲಿ ಸೇತುವೆ ಕಾಮಗಾರಿ ನಡೆಯುವ ಸ್ಥಳಕ್ಕೂ ಅವರು ಭೇಟಿ ನೀಡಿದರು. ಚುನಾವಣಾ ಸಂದರ್ಭದಲ್ಲಿ ತಹಶೀಲ್ದಾರ್ ಭೇಟಿ ನೀಡಿ ಸೇತುವೆ ನಿರ್ಮಾಣ ಮಾಡಿಸುವ ಭರವಸೆ ನೀಡಿದ ಹಿನ್ನಲೆಯಲ್ಲಿ ಮತದಾನ ಬಹಿಷ್ಕಾರ ಹಿಂಪಡೆದಿದ್ದರು. ಬಳಿಕ ಸೇತುವೆಯ ಕಾಮಗಾರಿ ಆರಂಭವಾಗಿತ್ತು. ಸೇತುವೆ ಕಾಮಗಾರಿಯನ್ನು ತಹಶೀಲ್ದಾರ್ ಪರಿಶೀಲಿಸಿದರು.

ಕಂದಾಯ ನಿರೀಕ್ಷಕ ಶಂಕರ್ ಎಂ.ಎಲ್, ಗ್ರಾಮ ಲೆಕ್ಕಾಧಿಕಾರಿ ಶರತ್ ಎಸ್.ಆರ್., ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ, ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಅಧ್ಯಕ್ಷೆ ವೀಣಾ ಮತ್ತಿತರರು ಉಪಸ್ಥಿತರಿದ್ದರು. ಪ್ರಕೃತಿ ವಿಕೋಪ ಉಂಟಾದಲ್ಲಿ ಗ್ರಾಮ ಮಟ್ಟದಲ್ಲಿ ರಕ್ಷಣಾ ತಂಡಗಳನ್ನು ರಚಿಸಲಾಗಿದೆ ಎಂದು ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

6 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

6 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

7 hours ago

ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ  ವ್ಯಾಪಕವಾಗಿ ಮಳೆಯಾಗಲಿದೆ…

7 hours ago

ಪಶು ಆಹಾರ : ಈ ವಿಷಯ ನಿಮಗೆ ತಿಳಿದಿರಲಿ !

ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…

8 hours ago

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago