Advertisement
ಸುದ್ದಿಗಳು

ಕಲ್ಮಕಾರು ಗ್ರಾಮಕ್ಕೆ ತಹಶೀಲ್ದಾರ್ ತಂಡ ಭೇಟಿ

Share

ಸುಳ್ಯ: ಕಳೆದ ವರ್ಷ ಮಳೆಗಾಲದಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾಗಿದ್ದ ಕಲ್ಮಕಾರು ಪ್ರದೇಶಕ್ಕೆ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

ಕಳೆದ ವರ್ಷ ಗುಡ್ಡ ಬಿರುಕು ಬಿಟ್ಟ ಸ್ಥಳಕ್ಕೆ ಮತ್ತು ಗುಡ್ಡ ಕುಸಿಯುವ ಭೀತಿಯಲ್ಲಿದ್ದ ಪ್ರದೇಶದ ಮನೆಗಳಿಗೆ ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿ ಅವರಿಗೆ ಧೈರ್ಯ ತುಂಬಿದರು. ಮಳೆ ಜಾಸ್ತಿಯಾದರೆ ಅಲ್ಲಿ ವಾಸಿಸುವ ಕುಟುಂಬಗಳನ್ನು ಕಲ್ಮಕಾರಿನ ಶಾಲೆ ಮತ್ತು ಅಂಗನವಾಡಿ ಕಟ್ಟಡಕ್ಕೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು. ಗುಡ್ಡ ಕುಸಿಯುವ ಭೀತಿಯಿರುವ ಪ್ರದೇಶದ ಕುಟುಂಬಗಳಿಗೆ ಬೇರೆ ಕಡೆ ಸರಕಾರಿ ಜಮೀನು ಕಾಯ್ದಿರಿಸಿ ಪಂಚಾಯತ್ ವತಿಯಿಂದ ಮನೆ ನಿರ್ಮಿಸಲು ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಸೇತುವೆ ನಿರ್ಮಾಣವಾಗದ ಹಿನ್ನಲೆಯಲ್ಲಿ ಕಲ್ಮಕಾರಿನ ಜನ ಚುನಾವಣಾ ಬಹಿಷ್ಕಾರ ಘೋಷಿಸಿದ್ದಲ್ಲಿ ಸೇತುವೆ ಕಾಮಗಾರಿ ನಡೆಯುವ ಸ್ಥಳಕ್ಕೂ ಅವರು ಭೇಟಿ ನೀಡಿದರು. ಚುನಾವಣಾ ಸಂದರ್ಭದಲ್ಲಿ ತಹಶೀಲ್ದಾರ್ ಭೇಟಿ ನೀಡಿ ಸೇತುವೆ ನಿರ್ಮಾಣ ಮಾಡಿಸುವ ಭರವಸೆ ನೀಡಿದ ಹಿನ್ನಲೆಯಲ್ಲಿ ಮತದಾನ ಬಹಿಷ್ಕಾರ ಹಿಂಪಡೆದಿದ್ದರು. ಬಳಿಕ ಸೇತುವೆಯ ಕಾಮಗಾರಿ ಆರಂಭವಾಗಿತ್ತು. ಸೇತುವೆ ಕಾಮಗಾರಿಯನ್ನು ತಹಶೀಲ್ದಾರ್ ಪರಿಶೀಲಿಸಿದರು.

Advertisement

ಕಂದಾಯ ನಿರೀಕ್ಷಕ ಶಂಕರ್ ಎಂ.ಎಲ್, ಗ್ರಾಮ ಲೆಕ್ಕಾಧಿಕಾರಿ ಶರತ್ ಎಸ್.ಆರ್., ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ, ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಅಧ್ಯಕ್ಷೆ ವೀಣಾ ಮತ್ತಿತರರು ಉಪಸ್ಥಿತರಿದ್ದರು. ಪ್ರಕೃತಿ ವಿಕೋಪ ಉಂಟಾದಲ್ಲಿ ಗ್ರಾಮ ಮಟ್ಟದಲ್ಲಿ ರಕ್ಷಣಾ ತಂಡಗಳನ್ನು ರಚಿಸಲಾಗಿದೆ ಎಂದು ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

15 hours ago

ಗೇರುಹಣ್ಣಿನ ಮೌಲ್ಯವರ್ಧನೆ : ಕೇರಳ ಕೃಷಿ ವಿವಿ ಸಾಧನೆ

ಬಹುತೇಕ ಕೊಳೆತು ಮಣ್ಣುಪಾಲಾಗುವ ಗೇರುಹಣ್ಣಿಗೂ(Cashew fruit)  ಮೌಲ್ಯವಿದೆ. ಆದರೆ ಮೌಲ್ಯವರ್ಧನೆ(Value addition) ಮಾಡಿದಾಗ ಮಾತ್ರ!…

16 hours ago

ನಿಮಗೆ ಗೊತ್ತೇ ???? ಬಿದಿರಿನ ಬಗೆಗಿನ ಕೆಲವು ಆಸಕ್ತಿದಾಯಕ ಸಂಗತಿಗಳು

ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ.…

16 hours ago

ಮೊಬೈಲ್ ಫೋನ್ ಅನ್ನು ನಿಮ್ಮ ದಿಂಬಿನ ಪಕ್ಕದಲ್ಲಿ ಇಟ್ಟುಕೊಂಡು ಮಲಗತ್ತೀರಾ..? ಈ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿ…..!

ಇಂದು ಮೊಬೈಲ್ ಫೋನ್(Mobile Phone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಫೋನ್ ಅನ್ನು…

17 hours ago

ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ : ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ : ಗ್ರಾಹಕರಿಗೆ ಜೋರಾದ ಖಾರದ ಅನುಭವ

ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ…

17 hours ago

Karnataka Weather |11-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

20 hours ago