Advertisement
ಸುದ್ದಿಗಳು

ಕಲ್ಮಕಾರು ಗ್ರಾಮಕ್ಕೆ ತಹಶೀಲ್ದಾರ್ ತಂಡ ಭೇಟಿ

Share

ಸುಳ್ಯ: ಕಳೆದ ವರ್ಷ ಮಳೆಗಾಲದಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾಗಿದ್ದ ಕಲ್ಮಕಾರು ಪ್ರದೇಶಕ್ಕೆ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ವರ್ಷ ಗುಡ್ಡ ಬಿರುಕು ಬಿಟ್ಟ ಸ್ಥಳಕ್ಕೆ ಮತ್ತು ಗುಡ್ಡ ಕುಸಿಯುವ ಭೀತಿಯಲ್ಲಿದ್ದ ಪ್ರದೇಶದ ಮನೆಗಳಿಗೆ ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿ ಅವರಿಗೆ ಧೈರ್ಯ ತುಂಬಿದರು. ಮಳೆ ಜಾಸ್ತಿಯಾದರೆ ಅಲ್ಲಿ ವಾಸಿಸುವ ಕುಟುಂಬಗಳನ್ನು ಕಲ್ಮಕಾರಿನ ಶಾಲೆ ಮತ್ತು ಅಂಗನವಾಡಿ ಕಟ್ಟಡಕ್ಕೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು. ಗುಡ್ಡ ಕುಸಿಯುವ ಭೀತಿಯಿರುವ ಪ್ರದೇಶದ ಕುಟುಂಬಗಳಿಗೆ ಬೇರೆ ಕಡೆ ಸರಕಾರಿ ಜಮೀನು ಕಾಯ್ದಿರಿಸಿ ಪಂಚಾಯತ್ ವತಿಯಿಂದ ಮನೆ ನಿರ್ಮಿಸಲು ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಸೇತುವೆ ನಿರ್ಮಾಣವಾಗದ ಹಿನ್ನಲೆಯಲ್ಲಿ ಕಲ್ಮಕಾರಿನ ಜನ ಚುನಾವಣಾ ಬಹಿಷ್ಕಾರ ಘೋಷಿಸಿದ್ದಲ್ಲಿ ಸೇತುವೆ ಕಾಮಗಾರಿ ನಡೆಯುವ ಸ್ಥಳಕ್ಕೂ ಅವರು ಭೇಟಿ ನೀಡಿದರು. ಚುನಾವಣಾ ಸಂದರ್ಭದಲ್ಲಿ ತಹಶೀಲ್ದಾರ್ ಭೇಟಿ ನೀಡಿ ಸೇತುವೆ ನಿರ್ಮಾಣ ಮಾಡಿಸುವ ಭರವಸೆ ನೀಡಿದ ಹಿನ್ನಲೆಯಲ್ಲಿ ಮತದಾನ ಬಹಿಷ್ಕಾರ ಹಿಂಪಡೆದಿದ್ದರು. ಬಳಿಕ ಸೇತುವೆಯ ಕಾಮಗಾರಿ ಆರಂಭವಾಗಿತ್ತು. ಸೇತುವೆ ಕಾಮಗಾರಿಯನ್ನು ತಹಶೀಲ್ದಾರ್ ಪರಿಶೀಲಿಸಿದರು.

ಕಂದಾಯ ನಿರೀಕ್ಷಕ ಶಂಕರ್ ಎಂ.ಎಲ್, ಗ್ರಾಮ ಲೆಕ್ಕಾಧಿಕಾರಿ ಶರತ್ ಎಸ್.ಆರ್., ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ, ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಅಧ್ಯಕ್ಷೆ ವೀಣಾ ಮತ್ತಿತರರು ಉಪಸ್ಥಿತರಿದ್ದರು. ಪ್ರಕೃತಿ ವಿಕೋಪ ಉಂಟಾದಲ್ಲಿ ಗ್ರಾಮ ಮಟ್ಟದಲ್ಲಿ ರಕ್ಷಣಾ ತಂಡಗಳನ್ನು ರಚಿಸಲಾಗಿದೆ ಎಂದು ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

7 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

7 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago