ಕಲ್ಮಡ್ಕದಲ್ಲಿ ಆಪರೇಶನ್ “ಪೆರ್ಮರಿ” : ನಾಯಿಯ ಕಾಡಿದ ಹೆಬ್ಬಾವು ಕಾಡಿಗೆ..!

August 28, 2019
6:19 PM

ಕಲ್ಮಡ್ಕ: ಸುಳ್ಯ ತಾಲೂಕಿನ ಕಲ್ಮಡ್ಕದ ಕೈಲಾರು ಈಶ್ವರ ಭಟ್ ಅವರ ತೋಟದಲ್ಲಿ  ಒಂದೇ ಸಮನೆ  ನಾಯಿ ಬೊಗಳುತ್ತಿತ್ತು. ಹೋಗಿ ನೋಡಿದಾಗ ಅವರ ಸಾಕು ನಾಯಿಯೊಂದನ್ನು ಹೆಬ್ಬಾವು ಹಿಡಿದು ತಿನ್ನುವ ಸ್ಥಿತಿಯಲ್ಲಿತ್ತು, ನಾಯಿ ಬದುಕಿಗಾಗಿ ಹೋರಾಟ ಮಾಡುತ್ತಿತ್ತು. ಇತರ  ನಾಯಿಗಳು ಬೊಗಳುತ್ತಾ  ರಕ್ಷಣೆಗೆ ಮುಂದಾಗುತ್ತಾ ಸಹಾಯಕ್ಕಾಗಿ ಯಜಮಾನನ್ನು  ಕರೆಯುತ್ತಿತ್ತು.

ಏನಿದು ನಾಯಿ ವಿಪರೀತ ಬೊಗಳುತ್ತದೆ ಎಂದು ಈಶ್ವರ ಭಟ್ಟರು ತೋಟಕ್ಕೆ ಹೋದಾಗ ಹೆಬ್ಬಾವು ನಾಯಿಯನ್ನು ಕಾಡುತ್ತಿತ್ತು, ಹೋರಾಟ ನಡೆಯುತ್ತಿತ್ತು. ಈಶ್ವರ ಭಟ್ ಸ್ಥಳಕ್ಕೆ ಬಂದಾಗ ಹೆಬ್ಬಾವು ನಾಯಿಯನ್ನು ಬಿಟ್ಟು ತೆಂಗಿನ ಮರದ ಬುಡದ ಕಸದೆಡೆಯಲ್ಲಿ ಅವಿತು ಕುಳಿತಿತ್ತು. ಇದನ್ನು ಅರಿತ ಈಶ್ವರ ಭಟ್  ಹೆಬ್ಬಾವನ್ನು ಕಾರ್ಮಿಕರೊಂದಿಗೆ ಸೇರಿ ಹಿಡಿದು ಗೋಣಿ ಚೀಲದಲ್ಲಿ ತುಂಬಿ ಕಲ್ಮಡ್ಕದ ಬಂಟಮಲೆ ತಪ್ಪಲಿನ ಕಾಡಿಗೆ ಸುರಕ್ಷಿತವಾಗಿ ಬಿಟ್ಟು ತನ್ನ ಪರಿಸರ ಪ್ರೇಮವನ್ನು ಮತ್ತು ಪ್ರಾಣಿ ದಯೆಯನ್ನು ಮೆರೆದರು. ಈಗ ಎರಡೂ ಪ್ರಾಣಿಗಳು ಸೇಫ್ ಮೋಡ್ ನಲ್ಲಿ…!. ಈಶ್ವರ ಭಟ್ಟದ ಪರಿಸರ ಪ್ರೇಮ, ಹಾವು ಹಿಡಿಯುವ ಧೈರ್ಯ ಮೆಚ್ಚುಗೆಗೆ ಕಾರಣವಾಯಿತು.

(Photo : ಸುರೇಶ್ಚಂದ್ರ ಕಲ್ಮಡ್ಕ)

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror