Advertisement
ಸುದ್ದಿಗಳು

ಕಲ್ಮಡ್ಕದಲ್ಲಿ ಆಪರೇಶನ್ “ಪೆರ್ಮರಿ” : ನಾಯಿಯ ಕಾಡಿದ ಹೆಬ್ಬಾವು ಕಾಡಿಗೆ..!

Share

ಕಲ್ಮಡ್ಕ: ಸುಳ್ಯ ತಾಲೂಕಿನ ಕಲ್ಮಡ್ಕದ ಕೈಲಾರು ಈಶ್ವರ ಭಟ್ ಅವರ ತೋಟದಲ್ಲಿ  ಒಂದೇ ಸಮನೆ  ನಾಯಿ ಬೊಗಳುತ್ತಿತ್ತು. ಹೋಗಿ ನೋಡಿದಾಗ ಅವರ ಸಾಕು ನಾಯಿಯೊಂದನ್ನು ಹೆಬ್ಬಾವು ಹಿಡಿದು ತಿನ್ನುವ ಸ್ಥಿತಿಯಲ್ಲಿತ್ತು, ನಾಯಿ ಬದುಕಿಗಾಗಿ ಹೋರಾಟ ಮಾಡುತ್ತಿತ್ತು. ಇತರ  ನಾಯಿಗಳು ಬೊಗಳುತ್ತಾ  ರಕ್ಷಣೆಗೆ ಮುಂದಾಗುತ್ತಾ ಸಹಾಯಕ್ಕಾಗಿ ಯಜಮಾನನ್ನು  ಕರೆಯುತ್ತಿತ್ತು.

ಏನಿದು ನಾಯಿ ವಿಪರೀತ ಬೊಗಳುತ್ತದೆ ಎಂದು ಈಶ್ವರ ಭಟ್ಟರು ತೋಟಕ್ಕೆ ಹೋದಾಗ ಹೆಬ್ಬಾವು ನಾಯಿಯನ್ನು ಕಾಡುತ್ತಿತ್ತು, ಹೋರಾಟ ನಡೆಯುತ್ತಿತ್ತು. ಈಶ್ವರ ಭಟ್ ಸ್ಥಳಕ್ಕೆ ಬಂದಾಗ ಹೆಬ್ಬಾವು ನಾಯಿಯನ್ನು ಬಿಟ್ಟು ತೆಂಗಿನ ಮರದ ಬುಡದ ಕಸದೆಡೆಯಲ್ಲಿ ಅವಿತು ಕುಳಿತಿತ್ತು. ಇದನ್ನು ಅರಿತ ಈಶ್ವರ ಭಟ್  ಹೆಬ್ಬಾವನ್ನು ಕಾರ್ಮಿಕರೊಂದಿಗೆ ಸೇರಿ ಹಿಡಿದು ಗೋಣಿ ಚೀಲದಲ್ಲಿ ತುಂಬಿ ಕಲ್ಮಡ್ಕದ ಬಂಟಮಲೆ ತಪ್ಪಲಿನ ಕಾಡಿಗೆ ಸುರಕ್ಷಿತವಾಗಿ ಬಿಟ್ಟು ತನ್ನ ಪರಿಸರ ಪ್ರೇಮವನ್ನು ಮತ್ತು ಪ್ರಾಣಿ ದಯೆಯನ್ನು ಮೆರೆದರು. ಈಗ ಎರಡೂ ಪ್ರಾಣಿಗಳು ಸೇಫ್ ಮೋಡ್ ನಲ್ಲಿ…!. ಈಶ್ವರ ಭಟ್ಟದ ಪರಿಸರ ಪ್ರೇಮ, ಹಾವು ಹಿಡಿಯುವ ಧೈರ್ಯ ಮೆಚ್ಚುಗೆಗೆ ಕಾರಣವಾಯಿತು.

(Photo : ಸುರೇಶ್ಚಂದ್ರ ಕಲ್ಮಡ್ಕ)

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

4 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

12 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

14 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

20 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

21 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago